ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಇರುವ ಎಸ್ಟಿಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ-ಪೋಷಕರ ಅಭಿಯಾನ ಹಾಗೂ ಕಾಲೇಜು ಪ್ರಾರಂಭೋತ್ಸವದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ತಲಾ 10 ಗ್ರಾಂ ಚಿನ್ನದ ಉಡುಗೊರೆ ನೀಡಿ ಗೌರವಿಸಿ ಬಳಿಕ ಮಾತನಾಡಿದರು.
ಸಂಸ್ಥೆಯೂ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದೆ. ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಅತ್ಯುತ್ತಮ ಸೌಲಭ್ಯಗಳು, ಅನುಭವಿ ಉಪನ್ಯಾಸಕರಿಂದ ಮಕ್ಕಳಿಗೆ ಭೋದನೆ ಮಾಡುವ ಕ್ರಮವಹಿಸಿದ್ದೇವೆ. ಪೋಷಕರು ಮಕ್ಕಳ ಸುರಕ್ಷತೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.ಸಂಸ್ಥೆ ಸಿಇಒ ಸಿ.ಪಿ.ಶಿವರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲು ಎಸ್ಟಿಜಿ ಅಕಾಡೆಮಿ ಪ್ರಾರಂಭಿಸಿ ನುರಿತ ಉಪನ್ಯಾಸಕರಿಂದ ನೀಟ್, ಸಿಇಟಿ ಹಾಗೂ ಜೆಇಇ ತರಬೇತಿಯನ್ನು ಕೊಡಿಸಲಾಗುತ್ತಿದೆ ಎಂದರು.
ಈಗ ಕಾಲೇಜಿಗೆ ದಾಖಲಾಗಿರುವ ಎಲ್ಲಾ ವಿದ್ಯಾರ್ಥಿಗಳು ಸಹ ಉಪನ್ಯಾಸಕರ ಬೋದನೆ ಜತೆಗೆ ಕಾಲೇಜಿನಲ್ಲಿ ದೊರೆಯುವ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳಲ್ಲೂ ಶ್ರದ್ಧೆಯಿಂದ ತೊಡಗಿಸಿಕೊಳ್ಳುವ ಮೂಲಕ ಮುಂದಿನ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯೆ ನಾಗಮ್ಮ ಪುಟ್ಟರಾಜು, ಕಾಲೇಜಿ ಪ್ರಾಂಶುಪಾಲ ಟಿ.ಮಾರುತಿ, ಆಡಳಿತಾಧಿಕಾರಿ ನಿವೇದಿತಾ ನಾಗೇಶ್, ಜೀವಶಾಸ್ತ್ರ ಮುಖ್ಯಸ್ಥ ವಿ.ಟಿ.ರಘುಸ್ವಾಮಿ, ನೀಟ್ ಮುಖ್ಯಸ್ಥ ದೇವಿ ಪ್ರಸಾದ್, ಜೆಇಇ ಮುಖ್ಯಸ್ಥ ವಿಜಯ್ ಪ್ರಕಾಶ್ ಹಾಗೂ ಸಿಬ್ಬಂದಿ ಪೋಷಕರು ಹಾಜರಿದ್ದರು.