- ಸರ್ವ ಸದಸ್ಯರ ಮಹಾಸಭೆಯಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ ಭರವಸೆ
ಕನ್ನಡಪ್ರಭ ವಾರ್ತೆ ಜಗಳೂರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನಡಿ ₹10 ಲಕ್ಷ ನೀಡಲಾಗುವುದು. ತಾಲೂಕು ಪಂಚಾಯಿತಿಯಲ್ಲಿ ಕಚೇರಿಗಾಗಿ ಮೀಸಲಿಟ್ಟ ₹10 ಲಕ್ಷ ಬಳಸಿ ಕಟ್ಟಡ ನಿರ್ಮಾಣ ತಕ್ಷಣವೇ ಪ್ರಾರಂಭಿಸಬೇಕು ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಖಾಸಗಿ ಶಾಲೆಗಳಲ್ಲಿ ನಿಯಮ ಮೀರಿ ದುಬಾರಿ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಸಂಬಂಧ ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿ ಪರಿಶೀಲಿಸಲಿದ್ದಾರೆ. ದುಬಾರಿ ಶುಲ್ಕ ವಸೂಲಾತಿ ಕಂಡುಬಂದರೆ ಅಂಥ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆಯು ಕಡಿಮೆ ಸ್ಥಾನ ಬಂದಿರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರ ಜಿಲ್ಲೆಯ ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಲು ಸೂಚಿಸಿದ್ದಾರೆ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನೆಲೆ ಜಗಳೂರು ತಾಲೂಕಿನ ಎಲ್ಲ ಪ್ರೌಢಶಾಲೆ, ಪಿಯುಸಿ ಕಾಲೇಜುಗಳ ಪ್ರಾಂಶುಪಾಲರ ಸಭೆ ರೂಪರೇಷೆ ಸಿದ್ಧಪಡಿಸಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಿರಲಿ, ಪಿಯು ಪರೀಕ್ಷೆಯಿರಲಿ ಉತ್ತಮ ಫಲಿತಾಂಶ ಬರಲು ತಯಾರಿಗೆ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುವರ್ಣಯುಗದ ಕಾಲ:
ಸನ್ಮಾನ:
ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ಚಂದ್ರಪ್ಪ, ರವಿಕುಮಾರ್, ಅಜ್ಜಪ್ಪ ನಾಡಿಗೇರ್, ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಮಹೇಶ್ವರಪ್ಪ, ಕಾರ್ಯದರ್ಶಿ ತಿಪ್ಪೇಸ್ವಾಮಿ, ಪದಾಧಿಕಾರಿಗಳಾದ ಬಣಕಾರ್, ವೀರೇಶ್, ಕಾಂಗ್ರೆಸ್ ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ ಇತರರು ಇದ್ದರು.
ಸಭೆಯಲ್ಲಿ ಪಿಡಬ್ಲ್ಯುಡಿ ನಿವೃತ್ತ ಎಂಜಿನಿಯರ್ ಪ್ರಭುಸ್ವಾಮಿ, ಅರಣ್ಯ ಇಲಾಖೆ ನೌಕರ ಮಂಜಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಪತ್ತಿನ ಸಹಕಾರ ಸಂಘದ ನೂತನ ಜಿಲ್ಲಾಧ್ಯಕ್ಷ ಚಂದ್ರಪ್ಪ ಅವರನ್ನು ಶಾಸಕ ಬಿ.ದೇವೇಂದ್ರಪ್ಪ ಸನ್ಮಾನಿಸಿದರು.