ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ವುಶು ಸಂಸ್ಥೆಯ ಸಹಭಾಗಿತ್ವದಲ್ಲಿ ಕರ್ನಾಟಕ ವುಶು ಸಂಸ್ಥೆ ಮತ್ತು ಬಿವಿವಿ ಸಂಘದ ಜಂಟಿಯಾಗಿ ಈ ಕ್ರೀಡಾಕೂಟ ಆಯೋಜಿಸಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪಾಂಡಿಚೇರಿ, ಓಡಿಶಾ, ಲಕ್ಷದ್ವೀಪ ಮತ್ತು ಅಂಡಮಾನ್-ನಿಕೋಬಾರ್ ಸೇರಿ ದಕ್ಷಿಣ ರಾಜ್ಯಗಳ 400 ಕ್ರೀಡಾಪಟುಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ವಿಜೇತ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ನಗದು ಬಹುಮಾನವಾಗಿ ₹ 7.20 ಲಕ್ಷ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಿದೆ. ಜೊತೆಗೆ ಪ್ರಶಸ್ತಿ ಪದಕ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಕ್ರೀಡಾಸಕ್ತರು ಕ್ರೀಡಾಕೂ ಟಕ್ಕೆ ಆಗಮಿಸಿ ಪಂದ್ಯಗಳನ್ನು ವೀಕ್ಷಸಲು ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಸಕ್ತರು ಆಗಮಿಸಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕೆಂದರು.ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ನಡೆಸಲು ಮತ್ತು ಆಗಮಿಸಲಿರುವ ಭಾರತೀಯ ವುಶು ಸಂಸ್ಥೆಯ ಅಧಿಕಾರಿಗಳು, ಕ್ರೀಡಾಪಟುಗಳ ಉಸ್ತುವಾರಿಗಾಗಿ ಅನೇಕ ಸಮಿತಿ ರಚಿಸಲಾಗಿದೆ. ವಸತಿ, ಆಹಾರ, ಸಾರಿಗೆ, ಮಾಧ್ಯಮ, ವೈದ್ಯ ಕೀಯ, ಕ್ರೀಡಾಂಗಣದ ಉಸ್ತುವಾರಿ ಸೇರಿ ಹಲವು ಸಮಿತಿ ರಚಿಸಲಾಗಿದ್ದು, ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ನಡೆಸಿ ಯಶಸ್ವಿಗೊಳಿಸಲು ಎಲ್ಲ ಸಮಿತಿಗಳು ಈಗಾಗಲೇ ಕಾರ್ಯನಿರತವಾಗಿವೆ ಎಂದರು. ವಿಶ್ವ ಜ್ಯೂನಿಯರ್ ವುಶು ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತೀಯ ಜ್ಯೂನಿಯರ್ ವುಶು ತಂಡದ ಆಯ್ಕೆಯ ಪ್ರಕ್ರಿಯೆಯನ್ನು ಜೂ.14 ರಿಂದ 15ರವರೆಗೆ ವಿದ್ಯಾಗಿರಿಯ ಬಿವಿವಿ ಸಂಘದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿರುವ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಸೆ.22 ರಿಂದ 30ರವರೆಗೆ ಬ್ರೂನಿ ದೇಶದಲ್ಲಿ ಆಯೋಜಿಸಲಾಗಿರುವ 9ನೇ ವಿಶ್ವ ಜ್ಯೂನಿಯರ್ ವುಶು ಕ್ರೀಡಾಕೂಟದಲ್ಲಿ ಭಾಗಿಯಾಗುವ ಭಾರತೀಯ ಜ್ಯೂನಿಯರ್ ವುಶು ತಂಡ ವನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಥಮ ಬಾರಿಗೆ ಬಾಗಲಕೋಟೆಯಲ್ಲಿ ನಡೆಯುತ್ತಿರುವುದು ನಗರಕ್ಕೆ ಮತ್ತು ಬಿವಿವಿ ಸಂಘಕ್ಕೆ ಅತ್ಯಂತ ಹೆಮ್ಮೆಯ ವಿಷಯ ಎಂದು ತಿಳಿಸಿದರು.
-ವೀರಣ್ಣ ಚರಂತಿಮಠ ಬಿವಿವಿ ಸಂಸ್ಥೆ ಕಾರ್ಯಾಧ್ಯಕ್ಷ