)
ಹಸಗೂಲಿಯಲ್ಲಿ ಅಮಾನೀಯ ಘಟನೆ | ಜೈಲು ಪಾಲಾದ ಕಾಮುಕಕನ್ನಡಪ್ರಭ ವಾರ್ತೆ , ಗುಂಡ್ಲುಪೇಟೆ
ಲೈಂಗಿಕ ದೌರ್ಜನ್ಯ ನಡೆಸಿದ ಮಹದೇವಪ್ಪನ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಯು/ಎಸ್-೭೫(೨) ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸಲು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏನಿದು ಘಟನೆ?
ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ ಭಾನುವಾರ ರಜಾ ದಿನವಾದ್ದರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿಯೇ ಇದ್ದರು. ತಂದೆ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಭಾನುವಾರ ಮಧ್ಯಾಹ್ನ ಅಂಗಡಿಗೆ ಸೋಪು ತರಲು ಹೋಗಿದ್ದ ಬಾಲಕಿಯನ್ನು ಆರೋಪಿ ಮಹದೇವಪ್ಪ ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತ, ಬಾಲಕಿಯ ಹಿಡಿದು ತಬ್ಬಿಕೊಂಡು ಆಕೆಯ ಎದೆಯನ್ನೆಲ್ಲ ಮುಟ್ಟಿ ಚಿವುಟಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಬಿಟ್ಟಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.