೧೦ವರ್ಷದ ಬಾಲಕಿ ಮೇಲೆ ೬೫ ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ!

KannadaprabhaNewsNetwork |  
Published : Mar 17, 2026, 01:45 AM IST
ಮಹಾಲಿಂಗಪುರ ಪುರಸಭೆಯ ಸನ್ ೨೦೨೬-೨೭ನೇ ಸಾಲಿನ ಪುರಸಭೆಯ ಅಯವ್ಯಯ(ಬಜೆಟ್)ಗೆ ಜಮಖಂಡಿ ಎಸಿ ಶ್ವೇತಾ ಬಿಡಿಕರ ಅನುಮೋದನೆ ನೀಡಿದರು. | Kannada Prabha

ಸಾರಾಂಶ

ಲೈಂಗಿಕ ದೌರ್ಜನ್ಯ ನಡೆಸಿದ ಮಹದೇವಪ್ಪನ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)‌ ಯು/ಎಸ್-‌೭೫(೨) ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸಲು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಸಗೂಲಿಯಲ್ಲಿ ಅಮಾನೀಯ ಘಟನೆ | ಜೈಲು ಪಾಲಾದ ಕಾಮುಕಕನ್ನಡಪ್ರಭ ವಾರ್ತೆ , ಗುಂಡ್ಲುಪೇಟೆ

ಅರವತ್ತೈದು ವರ್ಷದ ವ್ಯಕ್ತಿ ೧೦ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಪ್ಪಿಗೆ ಜೈಲು ಪಾಲಾದ ಘಟನೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಹಸಗೂಲಿ ಗ್ರಾಮದ ಮಹದೇವಪ್ಪ(೬೫) ಆರೋಪಿ. ಈತ ಅದೇ ಗ್ರಾಮದ ೧೦ ವರ್ಷ ವಯಸ್ಸಿನ ಐದನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಎದೆ ಚಿವುಟಿ ಗಾಯಗೊಳಿಸಿದ್ದಾನೆ ಎಂದು ತಾಲೂಕಿನ ಬೇಗೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಮಹದೇವಪ್ಪನ ಮೇಲೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)‌ ಯು/ಎಸ್-‌೭೫(೨) ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸಲು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏನಿದು ಘಟನೆ?

ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ ಭಾನುವಾರ ರಜಾ ದಿನವಾದ್ದರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಹಾಗೂ ಆಕೆಯ ಸಹೋದರಿ ಮನೆಯಲ್ಲಿಯೇ ಇದ್ದರು. ತಂದೆ ಹಾಗೂ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಭಾನುವಾರ ಮಧ್ಯಾಹ್ನ ಅಂಗಡಿಗೆ ಸೋಪು ತರಲು ಹೋಗಿದ್ದ ಬಾಲಕಿಯನ್ನು ಆರೋಪಿ ಮಹದೇವಪ್ಪ ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತ, ಬಾಲಕಿಯ ಹಿಡಿದು ತಬ್ಬಿಕೊಂಡು ಆಕೆಯ ಎದೆಯನ್ನೆಲ್ಲ ಮುಟ್ಟಿ ಚಿವುಟಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಬಿಟ್ಟಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಬೇಗೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಲಾ ನಿರ್ಮಾಣಕ್ಕಾಗಿ ಭೂ ಸ್ವಾಧೀನ; ರೈತರಿಗೆ ವೈಜ್ಞಾನಿಕ ಪರಿಹಾರ ನೀಡದೆ ತಾರತಮ್ಯ
ಐದಳ್ಳ ಕಾವಲು ಭೂಮಿ ಬಿಡಲ್ಲ ಎಂದು ರೈತರ ಪ್ರತಿಭಟನೆ