ಕನ್ನಡಪ್ರಭ ವಾರ್ತೆ ವಿಧಾನಸಭೆ
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಕಳೆದ 2 ವರ್ಷದಲ್ಲಿ ಅಂಬೇಡ್ಕರ್ ನಿಗಮಕ್ಕೆ ಮಂಜೂರು ಮಾಡಿರುವ ಅನುದಾನ ಹಾಗೂ ಬಿಡುಗಡೆ ಮಾಡಿರುವ ಅನುದಾನ ಗಮನಿಸಿದರೆ ದಲಿತರ ಬಗ್ಗೆ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂಬುದು ಸಾಬೀತಾಗುತ್ತದೆ. 2022-23ರಲ್ಲಿ ನಮ್ಮ ಬಿಜೆಪಿ ಸರ್ಕಾರ 219.75 ಕೋಟಿ ರು. ಬಿಡುಗಡೆ ಮಾಡಿತ್ತು. ಆದರೆ, 2023-24ಕ್ಕೆ ಕಾಂಗ್ರೆಸ್ ಸರ್ಕಾರ ಕೇವಲ 124 ಕೋಟಿ ರು. ಮಂಜೂರು ಮಾಡಿ ಬಿಡುಗಡೆ ಮಾಡಿದೆ. ಇಷ್ಟು ಅನುದಾನ ಕೊರತೆಯಾದರೆ ಯಾವ ಕಾರ್ಯಕ್ರಮಗಳನ್ನು ನೀಡಲು ಸಾಧ್ಯ ಎಂದು ಪ್ರಶ್ನಿಸಿದರು.
ಈ ವೇಳೆ ಬಿಜೆಪಿಯ ಹಲವು ಸದಸ್ಯರು ದನಿಗೂಡಿಸಿ, ಅಂಬೇಡ್ಕರ್ ನಿಗಮದಂಥ ಪ್ರಮುಖ ನಿಗಮಕ್ಕೆ 100 ಕೋಟಿ ರು. ಅನುದಾನ ಕಡಿತವಾದರೆ ಬೇರೆ ನಿಗಮಗಳ ಪಾಡೇನು? ಎಂದು ಕಿಡಿಕಾರಿದರು.ವಿಜಯಪುರದಲ್ಲಿ ಭೂ ಒಡೆತನ ಯೋಜನೆ ನೀಡುವಲ್ಲಿಯೇ ಅವ್ಯವಹಾರ ಆಗಿದೆ. 16 ಕೋಟಿ ರು. ಅವ್ಯವಹಾರ ಆಗಿದೆ. ಇಷ್ಟೆಲ್ಲ ಅವ್ಯವಹಾರವಾದರೆ ದಲಿತರು ಹೇಗೆ ಸಹಿಸಬೇಕು
ಭೂ ಖರೀದಿ ಪರಿಹಾರ ಹೆಚ್ಚಳಕ್ಕೆ ಕ್ರಮ: ಇನ್ನು ದಲಿತರು ಭೂಮಿ ಒಡೆಯನಾಗುವ ಸಲುವಾಗಿ ಸರ್ಕಾರ 20 ಲಕ್ಷ ರು. ನಿಗದಿ ಮಾಡಿದೆ. ಈಗ 20 ಲಕ್ಷ ರು.ಗಳಿಗೆ ಎಲ್ಲಿ ಜಮೀನು ಖರೀದಿಗೆ ಸಿಗುತ್ತದೆ. ಮಾರ್ಗಸೂಚಿ ದರ ಹೆಚ್ಚಳದಿಂದ ಬೇಕಾಬಿಟ್ಟಿ ಬೆಲೆ ಹೆಚ್ಚಳ ಆಗಿದೆ ಎಂದು ಸುನಿಲ್ಕುಮಾರ್ ಹೇಳಿದರು.