ಚನ್ನಪಟ್ಟಣ: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ಪ್ರತಿನಿತ್ಯ ಒಂದು ತಾಸು ಪ್ರತಿಭಟನೆ ನೂರನೇ ದಿನ ಪೂರೈಸಿತು.
ಯಾವುದೇ ಹೋರಾಟಗಳು ಎಂಟತ್ತು ದಿನಗಳಿಗೆ ಮಾತ್ರ ಸೀಮಿತವಾಗುತ್ತವೆ. ಅದರಲ್ಲೂ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಸುಲಭದ ಮಾತಲ್ಲ. ಈ ಹೋರಾಟಗಳಿಗೆ ಹಲವು ಸಮಸ್ಯೆಗಳು, ಕಷ್ಟಗಳು ಅಡೆತಡೆಗಳು ಬರುತ್ತದೆ. ಎಲ್ಲವನ್ನು ಮೆಟ್ಟಿ ಕಕಜವೇ ರಾಜ್ಯಾಧ್ಯಕ್ಷ ರಮೇಶ್ಗೌಡರ ನೇತೃತ್ವದಲ್ಲಿ ಕಾವೇರಿ ಸಂಕಷ್ಟ ಸೂತ್ರ ಹಾಗೂ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ನಡೆಸುತ್ತಿರುವ ಹೋರಾಟ ೧೦೦ ದಿನ ಪೂರೈಸಿರುವುದು ಸಣ್ಣ ಸಂಗತಿಯಲ್ಲ. ಕಾವೇರಿ ಹೋರಾಟವನ್ನು ದೆಹಲಿಯವರೆಗೂ ವಿಸ್ತರಿಸುವ ಅವರ ಪ್ರಯತ್ನಕ್ಕೆ ಫಲ ಸಿಗಲಿ ಎಂದು ಹಾರೈಸಿದರು.
ಜ್ಞಾನ ಸರೋವರ ವಿದ್ಯಾಸಂಸ್ಥೆ ಉಪನ್ಯಾಸಕ ಪ್ರವೀಣ್ಕುಮಾರ್ ಮಾತನಾಡಿ, ಕಾವೇರಿಗಾಗಿ ನಡೆಸುತ್ತಿರುವುದು ವೈಯಕ್ತಿಕ ಹೋರಾಟವಲ್ಲ. ಈ ಹೋರಾಟದಿಂದ ರಾಜ್ಯದ ರೈತರು ಮತ್ತು ಜನರಿಗೆ ಅನುಕೂಲವಾಗುತ್ತದೆ. ಕಾವೇರಿ ನದಿ ನೀರು ಕುಡಿಯುವ ಪ್ರತಿಯೊಬ್ಬರೂ ಈ ಹೋರಾಟದ ಜವಾಬ್ದಾರಿ ಹೊರಬೇಕಿದ್ದು, ಈ ನಿಟ್ಟಿನಲ್ಲಿ ಕಾವೇರಿ ಹೋರಾಟಕ್ಕೆ ನಮ್ಮ ಕಾಲೇಜಿನ ಸಂಪೂರ್ಣ ಬೆಂಬಲ ಇದೆ ಎಂದರು.ಡಾ.ರಾಜ್ ಕಲಾ ಬಳಗದ ಅಧ್ಯಕ್ಷ ಎಲೇಕೇರಿ ಮಂಜುನಾಥ್ ಮಾತನಾಡಿ, ಕನ್ನಡದ ನೆಲ, ಜಲ, ಭಾಷೆಯ ಅಸ್ಮಿತೆಗೆ ರಾಜ್ಯದಲ್ಲಿ ಎಲ್ಲೇ ಸಮಸ್ಯೆ ಉಂಟಾದರೂ ಅದರ ವಿರುದ್ಧ ಕಕಜವೇ ರಾಜ್ಯಾಧ್ಯಕ್ಷ ರಮೇಶ್ಗೌಡರು ಮೊದಲ ಚನ್ನಪಟ್ಟಣದಲ್ಲಿ ಹೋರಾಟದ ಕಿಚ್ಚನ್ನು ಹೊತ್ತಿಸುತ್ತಾರೆ. ಇದು ರಾಜ್ಯಾದ್ಯಂತ ಜ್ವಾಲೆಯಾಗಿ ರಾಜ್ಯದ ಗಮನ ಸೆಳೆಯುತ್ತದೆ. ಮೇಕೆದಾಟು ಯೋಜನೆ ಹೆಸರಲ್ಲಿ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದ ಸರ್ಕಾರ ಇಂದು ಕಾವೇರಿ ಹೋರಾಟಗಾರರ ವಿರುದ್ಧವೇ ಪ್ರಕರಣ ದಾಖಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ೧೦೦ ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದವರಿಗೆ ಕಾವೇರಿ ಕಾವಲುಗಾರ ಎಂದು ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.
ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್ ಗೌಡ, ರಾಜ್ಯ ಉಪಾಧ್ಯಕ್ಷ ಬೆಂಕಿಶ್ರೀಧರ್, ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಶಂಕರ್, ಕಲಾವಿದ ತಿಮ್ಮರಾಜು, ನಿ.ಶಿಕ್ಷಕ ಪುಟ್ಟಪ್ಪಾಜಿ, ಮುಜಾಯಿದ್, ದುರ್ಗೇಗೌಡ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಳಗದ ರಾಜು ಎಂ.ಎನ್., ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್, ಕರುನಾಡ ಸೇನೆಯ ಜಿಲ್ಲಾಧ್ಯಕ್ಷ ಜಯಕುಮಾರ್, ಲಕ್ಷ್ಮೀಶ್, ಕೆಂಪರಾಜು, ಕರುನಾಡ ಸೇನೆಯ ರಾಜ್ಯ ಉಪಾಧ್ಯಕ್ಷ ಜಗದೀಶ್ ಇತರರಿದ್ದರು.ಪೊಟೋ೧೩ಸಿಪಿಟಿ೪,೫:
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾವೇರಿ ಹೋರಾಟ ೧೦೦ನೇ ದಿನ ಪೂರೈಸಿತು.