ಕಬ್ಬು ಬೆಳೆಗಾರರಿಗೆ 100 ರು. ಪ್ರೋತ್ಸಾಹ ಧನ ತಕ್ಷಣ ಬಿಡುಗಡೆಗೆ ಮಾಡಿ

KannadaprabhaNewsNetwork |  
Published : Jun 07, 2026, 01:45 AM IST
3ಕೆಎಂಎನ್ ಡಿ25 | Kannada Prabha

ಸಾರಾಂಶ

ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ಸರ್ಕಾರ ₹50 ಪ್ರೋತ್ಸಾಹ ಧನ ಹಾಗೂ ಕಾರ್ಖಾನೆಯವರು ₹50 ಸೇರಿಸಿ ಒಟ್ಟು ₹100 ಗಳನ್ನು ಪಾವತಿ ಮಾಡುವಂತೆ ಘೋಷಣೆ ಮಾಡಿದ್ದರೂ ಈವರೆಗೂ ಹಣ ಪಾವತಿಸದೆ ಸಕ್ಕರೆ ಕಾರ್ಖಾನೆಗಳು ಮೀನಮೇಷ ಎಣಿಸುತ್ತಿವೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕಬ್ಬು ಬೆಳೆಗಾರರಿಗೆ ಪ್ರೋತ್ಸಾಹ ಧನ ₹100 ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಕಾರ್ಖಾನೆ ಆಡಳಿತ ಮಂಡಳಿಗಳನ್ನು ಒತ್ತಾಯಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ಸರ್ಕಾರ ₹50 ಪ್ರೋತ್ಸಾಹ ಧನ ಹಾಗೂ ಕಾರ್ಖಾನೆಯವರು ₹50 ಸೇರಿಸಿ ಒಟ್ಟು ₹100 ಗಳನ್ನು ಪಾವತಿ ಮಾಡುವಂತೆ ಘೋಷಣೆ ಮಾಡಿದ್ದರೂ ಈವರೆಗೂ ಹಣ ಪಾವತಿಸದೆ ಸಕ್ಕರೆ ಕಾರ್ಖಾನೆಗಳು ಮೀನಮೇಷ ಎಣಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ತಕ್ಷಣ ಕಬ್ಬು ಬೆಳೆಗಾರರಿಗೆ ಟನ್ ಕಬ್ಬಿಗೆ ₹100 ಪಾವತಿಸಬೇಕು. ನಂತರ ಪ್ರಸಕ್ತ ಸಾಲಿನಲ್ಲಿ ಕಬ್ಬು ಅರೆಯುವ ಕಾರ್ಯವನ್ನು ಪ್ರಾರಂಭಿಸಬೇಕು. ಕೆ.ಎಂ.ದೊಡ್ಡಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸೇರಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಹಣ ಸಂದಾಯ ಮಾಡಬೇಕು. ರೈತರಿಗೆ ಪ್ರೋತ್ಸಾಹ ಧನ ಟನ್ ಕಬ್ಬಿಗೆ ₹100 ತಕ್ಷಣ ಪಾವತಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉತ್ಪಾದನಾ ವೆಚ್ಚ ಪ್ರತಿ ವರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಡೀಸೆಲ್- ಪೆಟ್ರೋಲ್, ರಾಸಾಯನಿಕ ಗೊಬ್ಬರ ಮುಂತಾದವುಗಳ ಬೆಲೆಗಳು ಹೆಚ್ಚಿಸಿರುವ ಕಾರಣ ಕೃಷಿ ಉತ್ಪಾದನಾ ವೆಚ್ಚವೂ ಹೆಚ್ಚಾಗುತ್ತಿದೆ. ರೈತ ಸಾಲದ ಸುಳಿಯಲ್ಲಿ ಸಿಲುಕಿದ್ದು ರೈತರ ಆರ್ಥಿಕ ಸ್ಥಿತಿ ಪೂರ್ಣ ಹದಗೆಟ್ಟಿದೆ. ರೈತರು ಕೃಷಿಯಿಂದ ವಿಮುಖರಾಗುವತ್ತ ಸಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷಿ ಉತ್ಪಾದನಾ ವೆಚ್ಚಗಳ ಹೆಚ್ಚಳ, ಡೀಸೆಲ್ ಬೆಲೆ ಏರಿಕೆಯಿಂದ ಉಳುಮೆ ವೆಚ್ಚ, ರಾಸಾಯನಿಕ ಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕಗಳ ಬೆಲೆ ಹೆಚ್ಚಳ, ಕಬ್ಬು ಕಟಾವು, ಬೆಲೆ ಹಾಗೂ ಕೃಷಿ ಕಾರ್ಮಿಕರ ಕೂಲಿ ಏರಿಕೆ, ಕೃಷಿ ಉತ್ಪನಾ ವೆಚ್ಚ ದುಪ್ಪಟ್ಟಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ 2026- 27ನೇಸಾಲಿನ ಕಬ್ಬು ಅರೆಯುವ ಸಾಲಿಗೆ ಕೇಂದ್ರ ಸರ್ಕಾರ ಟನ್ ಕಬ್ಬಿಗೆ ₹5 ಸಾವಿರ ಎಫ್‌ಆರ್‌ಪಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಸಾಲಿನ ₹50 ಪಾವತಿ ಮಾಡುವವರೆಗೆ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು, ಕಬ್ಬು ಅರೆಯಲು ಅವಕಾಶ ನೀಡುವುದಿಲ್ಲ ಎಂದು ರೈತ ಸಂಘದ ಮೂಲಕ ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಆಚರಿಸಲಿ
ಮಕ್ಕಳಿಗೆ ಪರಿಸರ ಸಂರಕ್ಷಣೆ ಪಾಠ ಬಹುಮುಖ್ಯ: ವೈ.ಕೆ.ತಿಮ್ಮೇಗೌಡ