ಪಾದಯಾತ್ರೆಗೆ ವಿಜಯನಗರ ಜಿಲ್ಲೆಯಿಂದ 1000 ಕಾರ್ಯಕರ್ತರು: ಚನ್ನಬಸವನಗೌಡ ಪಾಟೀಲ್‌

KannadaprabhaNewsNetwork |  
Published : Jul 31, 2024, 01:12 AM IST
ಕೊಟ್ಟೂರಿನಲ್ಲಿ ನಡೆದ ಹಗರಿಬೊಮ್ಮನಹಳ್ಳಿ ಬಿಜೆಪಿ ಮಂಡಲ ಕಾರ್ಯಕಾರಿ ಸಮಿತಿ ಸಭೆಯನ್ನು ಜಿಲ್ಲಾಧ್ಯಕ್ಷ ಪಿ.ಚನ್ನಬಸವನಗೌಡ ಪಾಟೀಲ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ಜನರ ಅಭಿವೃದ್ಧಿ ಕಾಳಜಿ ಕಾಂಗ್ರೆಸ್‌ ಪಕ್ಷಕ್ಕೆ ಕಿಂಚಿತ್ತು ಇಲ್ಲವಾಗಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿದೆ.

ಕೊಟ್ಟೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ದೊಡ್ಡ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದ್ದು ವಾಲ್ಮೀಕಿ ಅಭಿವೃದ್ದಿ ನಿಗಮ ಮತ್ತು ಮುಡ ಹಗರಣ ಸಂಬಂಧ ಸಿಎಂ ರಾಜೀನಾಮೆಗೆ ಒತ್ತಾಯಿಸಿ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿ ಆ.3ರಿಂದ ಹಮ್ಮಿಕೊಂಡಿರುವ ಬೆಂಗಳೂರಿಂದ ಮೈಸೂರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ವಿಜಯನಗರ ಜಿಲ್ಲಾ ಬಿಜೆಪಿಯಿಂದ 1000 ಕಾರ್ಯಕರ್ತರು ತೆರಳಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪಿ.ಚನ್ನಬಸವನಗೌಡ ಪಾಟೀಲ್‌ ಹೇಳಿದರು.ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಗರಿಬೊಮ್ಮನಹಳ್ಳಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಅಭಿವೃದ್ಧಿ ಕಾಳಜಿ ಕಾಂಗ್ರೆಸ್‌ ಪಕ್ಷಕ್ಕೆ ಕಿಂಚಿತ್ತು ಇಲ್ಲವಾಗಿದೆ. ಭ್ರಷ್ಟಾಚಾರ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ವಚ್ಛ ಆಡಳಿತದ ಮುಖವಾಡ ಹೊತ್ತು ಭ್ರಷ್ಟಾಚಾರದಲ್ಲಿ ತೊಡಗಿರುವುದಲ್ಲದೆ, ಹೆಚ್ಚಿನ ಪ್ರಮಾಣದಲ್ಲಿ ನಡೆಯಲು ಪ್ರೋತ್ಸಾಹಕರಾಗಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣಸೆ ರಾಮಣ್ಣ ಮಾತನಾಡಿ, ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರನ್ನು ತಮ್ಮ ಪಕ್ಷದಲ್ಲಿ ಇರಿಸಿಕೊಂಡು ಜೀವಿತಾಅವಧಿಯುದ್ದಕ್ಕೂ ಅವರನ್ನು ಗೌರವದಿಂದ ಕಾಣದೇ ಅಲಕ್ಷಿಸಿದ ಕಾಂಗ್ರೆಸ್ಸಿಗರು ಇದೀಗ ಅಂಬೇಡ್ಕರ್‌ ಅವರಿಗೆ ಗೌರವ ಕೊಡುವ ಮಾತನಾಡುತ್ತಿರುವುದು ಅವರ ಸೋಗಲಾಡಿತನ ತೋರಿಸುತ್ತದೆ ಎಂದರು.

ಮಂಡಲ ಅಧ್ಯಕ್ಷ ಬೆಣಕಲ್‌ ಪ್ರಕಾಶ್‌ ಅಧ್ಯಕ್ಷತೆ ವಹಿಸಿದ್ದರು.

ಪಪಂ ಸದಸ್ಯರಾದ ಕೆ.ಎಸ್. ಈಶ್ವರಗೌಡ, ಜಿ.ಸಿದ್ದಯ್ಯ, ಮುಟುಕನಹಳ್ಳಿ ಕೊಟ್ರೇಶ್‌, ಜಯಪ್ರಕಾಶ್‌, ಪಿ.ಭರಮನಗೌಡ, ಅಂಗಡಿ ಪಂಪಾಪತಿ, ಪಿ.ಎಚ್.ಕೊಟ್ರೇಶ್‌, ಪಿ.ನಾಗರಾಜ, ಜೋಗಿ ಹನುಮಂತಪ್ಪ, ಕೋಗಳಿ ಹನುಮಂತಣ್ಣ, ಎಂ.ಸಿ. ಕೆಂಗಪ್ಪ, ಮರಬದ ಕೊಟ್ರೇಶ್, ಶಾಂತಮ್ಮ, ಸಂಜೀವ ರೆಡ್ಡಿ , ರಾಘವೇಂದ್ರ ಇದ್ದರು. ಅರವಿಂದ ಬಸಾಪುರ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಬಿಕ್ಕಟ್ಟು, ಬಲವಂತದ ಭೂಸ್ವಾಧೀನಕ್ಕೆ ಸಿಪಿಎಂ ವಿರೋಧ
ಕನ್ನಡಪ್ರಭ, ಸುವರ್ಣ ನ್ಯೂಸಿಂದ ಚಿತ್ರಕಲಾ ಸ್ಪರ್ಧೆ ಇಂದು