ಕನ್ನಡಪ್ರಭ ವಾರ್ತೆ ವಿಜಯಪುರ
ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ನೇಕಾರ ಸಮುದಾಯದ ತಾಯಂದಿರು ತಮ್ಮ ಮಕ್ಕಳಲ್ಲಿ ಹೆಣ್ಣು ಗಂಡೆಂಬ ಬೇಧಭಾವ ಮಾಡದೇ ಎಲ್ಲರಿಗೂ ಉನ್ನತ ಶಿಕ್ಷಣ ನೀಡಿ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದರು.ಹಂಪಿ ಹೇಮಕೂಟ, ಗಾಯತ್ರಿಪೀಠ ಮಹಾಸಂಸ್ಥಾನದ ಪೀಠಾಧೀಶ ದಯಾನಂದಪುರಿ ಮಹಾಸ್ವಾಮೀಜಿ, ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿ, ಮೈಂದರ್ಗಿ ಗೌರಿ ಕಟ್ಟಾ ಹಿರೇಮಠದ ಅಭಿನವ ರೇವಣಸಿದ್ದೇಶ್ವರ ಶ್ರೀ, ವಿರಕ್ತಮಠ ಸಿದ್ಧಾಶ್ರಮದ ಮೃತ್ಯುಂಜಯ ಆಶೀರ್ವಚನ ನೀಡಿದರು. ಸಾನ್ನಿಧ್ಯ ವಿಜಯಪುರ-ಗದಗ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಶ್ರೀ ಸೇರಿದಂತೆ ವಿವಿಧ ಮಠಾಧೀಶರು ವಹಿಸಿದ್ದರು. ಅಧ್ಯಕ್ಷತೆ ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಎಸ್.ದಡ್ಡೇನವರ ವಹಿಸಿದ್ದರು.ಪ್ರಧಾನ ಕಾರ್ಯದರ್ಶಿ ಧನರಾಜ್ ಅಳ್ಳಿಕಟ್ಟಿ, ಬಿಜೆಪಿ ಧುರೀಣ ವಿಜುಗೌಡ ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ, ಪ್ರಮುಖರಾದ ಎ.ಬಿ.ಅಂಕದ, ಎಸ್.ಜಿ.ಸುರಪುರ, ಬಸವರಾಜ ಚಿತ್ತರಗಿ, ಬಿ.ಎಂ.ನೂಲ್ವಿ, ಡಾ.ವಿ.ಜಿ.ತೊರವಿ, ಎನ್.ಎಂ.ಪ್ಯಾಟಿ, ಡಾ.ಎಸ್.ಆರ್.ಡೋಣಗಾಂವ, ಬಸವರಾಜ ಚಿಂಚೋಳಿ, ಅಶ್ವಿನಿಕುಮಾರ ಕೋಷ್ಠಿ, ಎನ್.ಎಸ್.ಬಾವಿಕಟ್ಟಿ, ಆನಂದ ಹುಲಮನಿ, ಈರಣ್ಣ ಕೊಪ್ಪಳ, ಡಾ.ಮನೋಹರ ಔರಸಂಗ ಮುಂತಾದವರು ಇದ್ದರು.
ಡಾ.ಸಂಗಮೇಶ ಮೇತ್ರಿ ಸ್ವಾಗತಿಸಿದರು. ಚಂದ್ರಕಲಾ ಹಿಟ್ನಳ್ಳಿ, ಸಂತೋಷ ಬಂಡೆ ನಿರೂಪಿಸಿದರು. ಬಸವರಾಜ ಹುಬ್ಬಳ್ಳಿ ವಂದಿಸಿದರು.ಕೋಟ್..
ನೇಕಾರರು ತಮ್ಮೊಳಗಿನ ಭಿನ್ನಾಭಿಪ್ರಾಯ ಮರೆತು ಸಂಘಟಿತರಾದಾಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ. ಎಲ್ಲರೂ ತಮ್ಮಲ್ಲಿನ ಒಡಕು ಮನೋಭಾವ ತೊರೆದು ಸನಾತನ ಧರ್ಮ ಮತ್ತು ದೇಶದ ಉಳಿವಿಗಾಗಿ ದುಡಿಯಬೇಕು.-ಬಸನಗೌಡ ಪಾಟೀಲ ಯತ್ನಾಳ, ಶಾಸಕರು.