ಕ್ಷೇತ್ರಕ್ಕೆ 11 ಪಬ್ಲಿಕ ಶಾಲೆ ಮಂಜೂರು

KannadaprabhaNewsNetwork |  
Published : Dec 18, 2025, 02:30 AM IST
17ಕೆಕೆಆರ್1:ಕುಕನೂರು ಪಟ್ಟಣದಲ್ಲಿ ಜರುಗಿದ ಸುದ್ದಿಗೋಷ್ಠಿ ಉದ್ದೇಶಿಸಿ ತಾಲೂಕ ಬ್ಲಾಕ್ ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಮಾತನಾಡಿದರು.  | Kannada Prabha

ಸಾರಾಂಶ

ಎಲ್‌ಕೆಜಿಯಿಂದ ಪಿಜಿವರೆಗೂ ಕನ್ನಡ ಮತ್ತು ಇಂಗ್ಲೀಷ ಮಾಧ್ಯಮದಲ್ಲಿ ಕರ್ನಾಟಕ ಪಬ್ಲಿಕ ಶಾಲೆಯಲ್ಲಿ ಮಕ್ಕಳು ಅಭ್ಯಾಸ ಮಾಡಬಹುದು. ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ

ಕುಕನೂರು: ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ 11ಪಬ್ಲಿಕ ಶಾಲೆಗಳನ್ನು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರಡ್ಡಿ ಮಂಜೂರು ಮಾಡಿಸಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಹೇಳಿದರು.

ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಲ್‌ಕೆಜಿಯಿಂದ ಪಿಜಿವರೆಗೂ ಕನ್ನಡ ಮತ್ತು ಇಂಗ್ಲೀಷ ಮಾಧ್ಯಮದಲ್ಲಿ ಕರ್ನಾಟಕ ಪಬ್ಲಿಕ ಶಾಲೆಯಲ್ಲಿ ಮಕ್ಕಳು ಅಭ್ಯಾಸ ಮಾಡಬಹುದು. ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. 8 ಪಬ್ಲಿಕ್ ಶಾಲೆಗಳು ಕಲ್ಯಾಣ ಕರ್ನಾಟಕ ಅನುದಾನದಿಂದ ಹಾಗೂ ಮೂರು ಶಾಲೆಗಳು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ಮಂಜೂರಾಗಿವೆ ಎಂದರು.

ಕ್ಷೇತ್ರದ ಗುನ್ನಾಳ, ಹಿರೇಅರಳಿಹಳ್ಳಿ, ಕಲ್ಲೂರು, ಬಳೂಟಗಿ, ಬಿನ್ನಾಳ, ಹಿರೇಬೀಡನಾಳ, ಮಂಡಲಗಿರಿ, ಕುದರಿಮೋತಿ, ಹಿರೇಮ್ಯಾಗೇರಿ, ಬನ್ನಿಕೊಪ್ಪ, ಗಾಣದಾಳ ಗ್ರಾಮಗಳಿಗೆ ಮಂಜೂರಾಗಿವೆ. ಪ್ರತಿ ಶಾಲೆಯ ಕಟ್ಟಡಗಳ ನಿರ್ಮಾಣಕ್ಕೆ ₹4 ಕೋಟಿ ಅನುದಾನ ನೀಡಲಾಗುತ್ತಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಕಲಿಸಲು ಶಿಕ್ಷಕರ ನೇಮಕಾತಿಗೂ ಸರ್ಕಾರ ಅಗತ್ಯ ಕ್ರಮ ವಹಿಸಿದೆ. ಒಟ್ಟಾರೆ ಯಲಬುರ್ಗಾ ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಲಾಗಿದೆ ಎಂದರು.

ರಾಯರಡ್ಡಿ ಸೋತಾಗ ಅಭಿವೃದ್ಧಿ ಹಿನ್ನಡೆ:

ಶಾಸಕ ಬಸವರಾಜ ರಾಯರಡ್ಡಿ ಕಳೆದ ಅವಧಿಯಲ್ಲಿ ಸೋತಾಗ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಅವರ ಸೋಲಿನ ಅವಧಿಯಲ್ಲಿ ಆಡಲಿತದಲ್ಲಿ ಇದ್ದವರು ಒಂದೂ ಸಹ ಕೆಪಿಎಸ್ ಶಾಲೆ ಮಂಜೂರು ಮಾಡಿಸಲಿಲ್ಲ. ರಾಜ್ಯದಲ್ಲಿಯೇ ಅತೀ ಹೆಚ್ಚು ಶಾಲೆ ಪಡೆದ ಹೆಮ್ಮೆ ಯಲಬುರ್ಗಾ ಕ್ಷೇತ್ರದ್ದು. ಅದು ರಾಯರಡ್ಡಿ ಕೊಡುಗೆ ಎಂದರು.

ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿದ್ದಯ್ಯ ಕಳ್ಳಿಮಠ, ಪಪಂ ಸದಸ್ಯ ಗಗನ ನೋಟಗಾರ, ಗ್ರಾಪಂ ಸದಸ್ಯ ಯಮನೂರಪ್ಪ ಕಟ್ಟಿಮನಿ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ರೆಹೆಮಾನಸಾಬ್ ಮಕ್ಕಪ್ಪನವರ್, ಮುತ್ತಪ್ಪ ವಾಲ್ಮೀಕಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ