ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ವಾರ್ತಾ ಭವನದಲ್ಲಿ ಬೆಳಗಾವಿ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದಲೂ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬಾಕಿ ಉಳಿದಿದ್ದ ₹1 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಅಲ್ಲದೇ, ಪ್ರತಿ ವರ್ಷ ₹45 ಲಕ್ಷ ಆಸ್ತಿ ತೆರಿಗೆ ವಿಧಿಸಲಾಗುತ್ತಿದೆ ಎಂದರು.
ಗ್ರಾಪಂಗಳಲ್ಲಿ ಬೋರವೆಲ್ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಕಡಿತ, ನಿಷ್ಪ್ರಯೋಜಕ ಬೋರವೆಲ್ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು. ಬೀದಿಗಳಲ್ಲಿ ಎಲ್ಇಡಿ ವಿದ್ಯುತ್ ಬಲ್ಬ್ಗಳ ಬಳಕೆ ಮಾಡಿರುವುದು ಸೇರಿದಂತೆ ಮತ್ತಿತರ ಕ್ರಮಗಳಿಂದಾಗಿ ಒಟ್ಟು ₹13 ಕೋಟಿ ಉಳಿತಾಯ ಮಾಡಲಾಗಿದೆ ಎಂದರು.ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೈಗೊಳ್ಳಲಾಗಿದೆ. ಪುರುಷ ಮತ್ತು ಮಹಿಳೆಯರಿಗೆ ಸರಿಸಮಾನವಾಗಿ ವೇತನ ಪಾವತಿಸಲಾಗುತ್ತಿದೆ. ಶೇ.57ರಷ್ಟು ಮಹಿಳೆಯರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಟಿಸಲಾಗುತ್ತಿದೆ. ಚರಂಡಿ, ಶಾಲಾ ಕಂಪೌಂಡ್ ನಿರ್ಮಿಸಲಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ನರೇಗಾ ಯೋಜನೆಯಡಿ ಸ್ಥಳೀಯ ₹1.10 ಕೋಟಿ ಜನತೆಗೆ ಉದ್ಯೋಗ ಸೃಷ್ಟಿಸಲಾಗಿದೆ ಎಂದರು.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಶೌಚಾಲಯ ನಿರ್ಮಿಸಲಾಗಿದೆ. ಬಳಕೆ ಮಾಡುವ ಸಂಬಂಧ ಜಾಗೃತಿ ಮೂಡಿಸಲಾಗಿದೆ. ಬ್ಲಾಕ್ ವಾಟರ್, ತಾಲೂಕಿನಲ್ಲಿ ಘಟಕ ನಿರ್ಮಿಸಲಾಗಿದೆ. ಚಿಕ್ಕೋಡಿಯಲ್ಲಿ ಹಾಗೂ ಅಥಣಿಯಲ್ಲಿ ಎಸ್ಟಿಪಿ ಘಟಕ ಸ್ಥಾಪಿಸಲಾಗುತ್ತಿದೆ. ಶೌಚಾಲಯ ನಿರ್ಮಿಸಲು ₹20 ಸಾವಿರ ಅನುದಾನ ನೀಡಲಾಗುತ್ತಿದೆ. ಜನರೂ ಕೂಡ ತಮ್ಮ ಸಹಭಾಗಿತ್ವವೂ ಬೇಕಾಗುತ್ತದೆ. ಬಯಲು ಶೌಚ ಮುಕ್ತವಾಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಟ್ಯಾಂಕರ್ ಮುಕ್ತ ಜಿಲ್ಲೆ: ಸಿಇಒ ಶಿಂಧೆ
ಚಿಕ್ಕೋಡಿ ವಿಭಾಗದಲ್ಲಿ 1610 ಗ್ರಾಮಗಳು ಹಾಗೂ ಬೆಳಗಾವಿ ವಿಭಾಗದಲ್ಲಿ 57 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆಂದರು. ರಾಜ್ಯದ ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮುಕ್ತ ಜಿಲ್ಲೆಯಾಗಿದೆ. ಸದ್ಯ ಜಿಲ್ಲೆಯ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲ ಗ್ರಾಪಂಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಟ್ಯಾಂಕರ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕೆಲವು ಅನುಷ್ಠಾನದಲ್ಲಿದ್ದರೆ, ಮತ್ತೆ ಕೆಲವು ಪ್ರಗತಿಯಲ್ಲಿವೆ. ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.