ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಆಯೋಜಿಸಿರುವ ಬೃಹತ್ ವೇದಿಕೆಯನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತಾ ಕಾರ್ಯ ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇತಿಹಾಸದಲ್ಲೆ ಅಧಿಕಾರಕ್ಕೆ ಬಂದ ಕೇವಲ 2 ವರ್ಷಗಳಲ್ಲಿ ಸಾವಿರಾರು ಕೋಟಿ ಅನುದಾನದ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿಯೊಬ್ಬರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸಚಿವರು, ನಿಗಮ, ಮಂಡಳಿ ಅಧ್ಯಕ್ಷರು ಹಾಗೂ ಜಿಲ್ಲೆಯ ಶಾಸಕರುಗಳು ಆಗಮಿಸಲಿದ್ದಾರೆ. ಈ ವೇಳೆ 1200 ಕೋಟಿ ರು. ಮೊತ್ತದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಲೋಕೋಪಯೋಗಿ, ಇಂಧನ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ 1400 ರು. ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಹಲವು ಕಾಮಗಾರಿಗಳು ಉದ್ಘಾಟನೆಗೆ ಸಿದ್ಧಗೊಂಡಿವೆ ಮತ್ತು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, 16 ಇಲಾಖೆಗಳಿಂದ ಒಟ್ಟು 87 ಕಾಮಗಾರಿಗಳ ಪೈಕಿ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ. ಎಲ್ಲಾ ಕಾಮಗಾರಿಗಳ ಒಟ್ಟು ಮೊತ್ತ 1146.76 ಕೋಟಿಗಳಾಗಿದೆ ಎಂದರು.
ಜಿಪಂ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ಕಾರ್ಯಕ್ರಮದಂದು ಜೀತ ವಿಮುಕ್ತ 85 ಜನರಿಗೆ ನನ್ನ ಗುರುತು ಅಭಿಯಾನದಡಿ 14 ದಾಖಲೆ ನೀಡಲಾಗುವುದು. ಸಾರಥಿ ಯೋಜನೆಯಡಿ ಇಬ್ಬರಿಗೆ ಕಾರ್ ಖರೀದಿಸಲು ಸಹಾಯಧನ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್, ಉಪಾಧ್ಯಕ್ಷ ಪ್ರಸನ್ನಕುಮಾರ್, ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ , ತಾಪಂ ಇಒ ರಾಮಲಿಂಗಯ್ಯ, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಚೆಲುವರಾಜು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.