ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ

KannadaprabhaNewsNetwork |  
Published : Oct 21, 2025, 01:00 AM ISTUpdated : Oct 21, 2025, 05:46 AM IST
ಕೃಷ್ಣರಾಜಸಾಗರ | Kannada Prabha

ಸಾರಾಂಶ

ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ.  12 ನದಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ!

 ಬೆಂಗಳೂರು :  ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. ಅಂದರೆ 12 ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ!

ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ನದಿಗಳ ನೀರನ್ನು 32 ಕಡೆ ಪರೀಕ್ಷೆಗೊಳಪಡಿಸುತ್ತದೆ. ಪ್ರತಿ ತಿಂಗಳು ನದಿಗಳ ನೀರನ್ನು ಪರೀಕ್ಷೆ ನಡೆಸಿ ಅವುಗಳ ವರದಿ ಸಿದ್ಧಪಡಿಸಲಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ನಡೆಸಲಾದ ಪರೀಕ್ಷಾ ವರದಿಯಂತೆ 12 ನದಿಗಳ ಪೈಕಿ ಯಾವುದೇ ನದಿ ನೀರೂ ನೇರವಾಗಿ ಕುಡಿಯಲು ಬಳಕೆ ಮಾಡದ ಸ್ಥಿತಿ ಇದೆ. ನದಿಗಳ ನೀರಿನಲ್ಲಿ ಆಮ್ಲಜನಕದ ಕೊರತೆ, ಬಯೋಕೆಮಿಕಲ್‌ ಆಕ್ಸಿಜನ್‌, ಕೋಲಿಫಾರ್ಮ್‌ ಬ್ಯಾಕ್ಟೀರಿಯಾ, ಫೆಕಲ್‌ ಕೋಲಿಫಾರ್ಮ್‌ ಬ್ಯಾಕ್ಟೀರಿಯಾಗಳು ಹೆಚ್ಚಿವೆ. ಹೀಗಾಗಿ 12 ನದಿಗಳ ನೀರಿನಲ್ಲಿ ಯಾವುದೇ ನದಿ ನೀರು ‘ಎ’ ದರ್ಜೆಗೆ ಸೇರಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

12 ನದಿಗಳ ಪೈಕಿ ನೇತ್ರಾವತಿ ನದಿ ನೀರು ಮಾತ್ರ ‘ಬಿ’ ದರ್ಜೆಯ ಗುಣಮಟ್ಟ ಹೊಂದಿದೆ ಎಂದು ಹೇಳಲಾಗಿದೆ. ಈ ನೀರನ್ನು ಸ್ನಾನ ಅಥವಾ ಗೃಹ ಬಳಕೆಗೆ ಉಪಯೋಗಿಸಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ. ಅದನ್ನು ಹೊರತುಪಡಿಸಿ ನೇರವಾಗಿ ಕುಡಿಯಲು ಯೋಗ್ಯವಲ್ಲ. ಉಳಿದಂತೆ 8 ನದಿಗಳ ನೀರು ‘ಸಿ’ ಮತ್ತು ಮೂರು ನದಿಗಳ ನೀರು ‘ಡಿ’ ದರ್ಜೆಯ ಗುಣಮಟ್ಟ ಹೊಂದಿವೆ. ಅದರಲ್ಲಿ ‘ಸಿ’ ದರ್ಜೆ ಹೊಂದಿರುವ ನದಿ ನೀರನ್ನು ಸಂಸ್ಕರಿಸಿ ಬಳಸಬಹುದಾಗಿದ್ದು, ‘ಡಿ’ ದರ್ಜೆಯ ನೀರನ್ನು ಮೀನುಗಾರಿಕೆ ಸೇರಿ ಇನ್ನಿತರ ಚಟುವಟಿಕೆಗೆ ಬಳಸಬಹುದಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. 

ಯಾಕೆ ಕುಡಿಯಲು ಯೋಗ್ಯವಲ್ಲ?

ಈ ನದಿಗಳ ನೀರಿನಲ್ಲಿ ಆಮ್ಲಜನಕದ ಕೊರತೆ, ಬಯೋಕೆಮಿಕಲ್‌ ಆಕ್ಸಿಜನ್‌, ಕೋಲಿಫಾರ್ಮ್‌ ಬ್ಯಾಕ್ಟೀರಿಯಾ, ಫೆಕಲ್‌ ಕೋಲಿಫಾರ್ಮ್‌ ಬ್ಯಾಕ್ಟೀರಿಯಾಗಳು ಹೆಚ್ಚಿವೆ. ಹೀಗಾಗಿ 12 ನದಿಗಳ ನೀರಿನಲ್ಲಿ ಯಾವುದೇ ನದಿ ನೀರು ‘ಎ’ ದರ್ಜೆಗೆ ಸೇರಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಯಾವೆಲ್ಲ ನದಿಗಳ ಪರೀಕ್ಷೆ?ಬಿ ದರ್ಜೆ: ನೇತ್ರಾವತಿ ಸಿ ದರ್ಜೆ: ಲಕ್ಷ್ಮಣ ತೀರ್ಥ, ತುಂಗ ಭದ್ರಾ, ಕಾವೇರಿ, ತುಂಗಾ, ಭದ್ರಾ, ಕಬಿನಿ, ಕೃಷ್ಣಾ, ಶಿಂಷಾಡಿ ದರ್ಜೆ: ಭೀಮಾ, ಕಾಗಿಣಾ, ಅರ್ಕಾವತಿ

ನೇತ್ರಾವತಿ ಮಾತ್ರ ಸ್ವಲ್ಪ ಶುದ್ಧ

12 ನದಿಗಳ ಪೈಕಿ ನೇತ್ರಾವತಿ ನದಿ ನೀರು ಮಾತ್ರ ‘ಬಿ’ ದರ್ಜೆಯ ಗುಣಮಟ್ಟ ಹೊಂದಿದೆ. ಈ ನೀರನ್ನು ಸ್ನಾನ ಅಥವಾ ಗೃಹ ಬಳಕೆಗೆ ಉಪಯೋಗಿಸಬಹುದು. ಅದನ್ನು ಹೊರತುಪಡಿಸಿ ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಹೇಳಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌