ಶೀಘ್ರ ಅನುಮತಿಗೆ 12 ಕಡೆ ಏಕಗವಾಕ್ಷಿ ವ್ಯವಸ್ಥೆ

KannadaprabhaNewsNetwork |  
Published : Sep 01, 2024, 01:55 AM IST
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಪರಿಶೀಲಿಸಿದರು. | Kannada Prabha

ಸಾರಾಂಶ

ಗಣೇಶ ಉತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಸ್ಕಾಂ, ಪೊಲೀಸ್, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಆಯಾ ಪೊಲೀಸ್ ಠಾಣೆಯ ಏಕಗವಾಕ್ಷಿ ಕೇಂದ್ರದಲ್ಲಿ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಉಪಸ್ಥಿತರಿದ್ದು, ಅಗತ್ಯ ಅನುಮತಿ ನೀಡಲಿದ್ದಾರೆ. ಈ ಕುರಿತು ಏಕಗವಾಕ್ಷಿ ತಂಡಗಳಿಗಾಗಿ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಮಂಟಪಗಳನ್ನು ನಿರ್ಮಿಸಬೇಕು. ಸಾರ್ವಜನಿಕರ ಸಂಚಾರಕ್ಕೆ, ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಾಗೂ ಆಂಬ್ಯುಲೆನ್ಸ್ ಸಂಚಾರಕ್ಕೆ ತೊಂದರೆಯಾಗದಂತೆ ಮಂಟಪದ ಅಳತೆ ಮಿತಿಯೊಳಗೆ ಇರುವಂತೆ ನಿಗಾವಹಿಸಬೇಕು. ಗಣೇಶ ಮೂರ್ತಿಗಳ ಆಗಮನ ಹಾಗೂ ವಿಸರ್ಜನೆ ಸಂದರ್ಭದಲ್ಲಿ ರಸ್ತೆಯಲ್ಲಿನ ವಿದ್ಯುತ್ ಹಾಗೂ ವಿವಿಧ ದೂರ ಸಂಪರ್ಕ ಕೆಬಲ್‌ಗಳನ್ನು ಮೇಲಸ್ಥರಕ್ಕೆ ಎತ್ತರಿಸಲು ಸೂಚಿಸಿದ ಅವರು, ಅರಣ್ಯ ಇಲಾಖೆ ವತಿಯಿಂದ ಮರಗಳ ರೆಂಬೆ ಕತ್ತರಿಸಲು‌‌ ಕ್ರಮ‌ ಕೈಗೊಳ್ಳುವಂತೆ ಸೂಚಿಸಿದರು.

ಹೆಸ್ಕಾಂ, ಪೊಲೀಸ್‌, ಪಾಲಿಕೆ, ಅರಣ್ಯ, ಅಗ್ನಿಶಾಮಕ, ಬಿ.ಎಸ್.ಎನ್.ಎಲ್ ಹಾಗೂ ಇತರೆ ಇಲಾಖೆ ಅಧಿಕಾರಿಗ‌ಳು ಮೆರವಣಿಗೆ ಮಾರ್ಗದಲ್ಲಿ ಜಂಟಿಯಾಗಿ ಸಮೀಕ್ಷೆ‌ ನಡೆಸಿ ನಿಖರವಾದ ವರದಿಒದಗಿಸಬೇಕು. ಪಾಲಿಕೆ ವತಿಯಿಂದ ಗಣೇಶ‌ ಆಗಮನ ಹಾಗೂ ವಿಸರ್ಜನೆ ಮಾರ್ಗದಲ್ಲಿನ ರಸ್ತೆ ದುರಸ್ತಿಗೆ ಕ್ರಮ ವಹಿಸಬೇಕು. ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಿ, ಕತ್ತಲೆ ಹೆಚ್ಚಿರುವ‌ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ‌, ಕಣ್ಗಾವಲು ಸ್ಥಾವರ ಹಾಗೂ ಸಾರ್ವಜನಿಕರ ಗ್ಯಾಲರಿ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.

ನಗರದಲ್ಲಿ ಬಂಟಿಂಗ್, ಬ್ಯಾನರ್ ಅಳವಡಿಕೆ ಕುರಿತು ನೀಡಲಾಗುವ ಅನುಮತಿಗಳ ವಿವರಗಳನ್ನು ಪೊಲೀಸ್ ಇಲಾಖೆಗೆ‌ ನೀಡಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪಿ.ಒ.ಪಿ ಗಣೇಶ ಮೂರ್ತಿಗಳ‌ ಬಳಸದಂತೆ ಪಾಲಿಕೆ ವಾಹನಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

‌ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಡಿಸಿಪಿ ರೋಹನ ಜಗದೀಶ, ಎಸಿಪಿ ಶ್ರೀಕಾಂತ ಕಟ್ಟಿಮನಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ ಸೇರಿದಂತೆ ಹೆಸ್ಕಾಂ, ಪೊಲೀಸ್, ಅರಣ್ಯ, ಅಗ್ನಿಶಾಕಮ ದಳ, ಆರೋಗ್ಯ, ಕಂದಾಯ, ಬಿಎಸ್ ಎನ್ ಎಲ್, ಮಹಾನಗರ ಪಾಲಕೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಕಪಿಲೇಶ್ವರ ಹೊಂಡಕ್ಕೆ ಜಿಲ್ಲಾಧಿಕಾರಿ‌ ಭೇಟಿ:

ಸಭೆಯ ಬಳಿಕ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಗರದ ಕಪಿಲೇಶ್ವರ ಹೊಂಡಕ್ಕೆ ಭೇಟಿ ನೀಡಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಸಿದ್ಧತೆ ಪರಿಶೀಲಿಸಿ, ಪ್ರತಿವರ್ಷದಂತೆ ಸ್ವಚ್ಛತೆ, ಬೆಳಕಿನ ವ್ಯವಸ್ಥೆ, ಭದ್ರತೆ ಮತ್ತಿತರ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ನಿರ್ದೇಶನ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಎಸಿಪಿ ಶ್ರೀಕಾಂತ ಕಟ್ಟಿಮನಿ ಮತ್ತಿತರರು ಉಪಸ್ಥಿತರಿದ್ದರು.

-----ಪೋಲಿಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳು ಜಂಟಿಯಾಗಿ ನಗರದಲ್ಲಿ ಸಂಚರಿಸಿ ಗಣೇಶ‌ ಪ್ರತಿಷ್ಠಾನ ಮಂಟಪಗಳ ಹಾಗೂ ಮೆರವಣಿಗೆ ಸ್ಥಳಗಳ ಕುರಿತು ಸಮೀಕ್ಷೆ ನಡೆಸಬೇಕು.

- ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಪೊಲೀಸ್‌ ಆಯುಕ್ತ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ