ಕನ್ನಡಪ್ರಭ ವಾರ್ತೆ ಮಂಗಳೂರು
ಪಾಲಿಕೆಯ ಆಡಳಿತಾಧಿಕಾರಿಯಾಗಿ ಗುರುವಾರ ಸಾರ್ವಜನಿಕರ ಕುಂದು ಕೊರತೆ ಆಲಿಸುವ ಫೋನ್- ಇನ್ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಗರದ ಸಮಗ್ರ ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಮುಂದಿನ 6 ವರ್ಷಗಳ ಜನಸಂಖ್ಯೆಯನ್ನು ಆಧರಿಸಿ ಯೋಜನೆ ಸಿದ್ಧವಾಗಲಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜತೆಗೂ ಮಾತುಕತೆ ನಡೆದಿದ್ದು, ಮುಂದಿನ ಬಜೆಟ್ನಲ್ಲಿ ಈ ಯೋಜನೆಯನ್ನು ಮಂಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.ನಾಯಿಗಳ ಪುನರ್ವಸತಿಗೆ 10 ಎಕರೆ:
ಮೊದಲ ಹಂತದಲ್ಲಿ ಮಂಗಳೂರು, ಮೂಲ್ಕಿ, ಉಳ್ಳಾಲ ವ್ಯಾಪ್ತಿಯಲ್ಲಿ ಜಾಗ ಗುರುತಿಸಲಾಗುತ್ತಿದೆ. ಬಳಿಕ ಅಗತ್ಯ ಅನುದಾನಕ್ಕೆ ಸರ್ಕಾರವನ್ನು ಕೋರಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.ಬಾಕ್ಸ್
ಫೋನ್- ಇನ್ ಕಾರ್ಯಕ್ರಮದಲ್ಲಿ ಒಟ್ಟು 30 ಕರೆಗಳನ್ನು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸ್ವೀಕರಿಸಿದ್ದು, ಮುಖ್ಯವಾಗಿ ರಸ್ತೆ ಗುಂಡಿ, ಕಸ ವಿಲೇವಾರಿಯಾಗದೆ ಸಮಸ್ಯೆ, ಒಳಚರಂಡಿಯ ಸಮಸ್ಯೆಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದವು. ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸ್ಥಳದಲ್ಲೇ ಸೂಚಿಸಿದರು.
ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಮಂಗಳೂರು ನಗರಕ್ಕೆ ಸರ್ಕಾರದಿಂದ 100 ಎಲೆಕ್ಟ್ರಿಕ್ ಸರ್ಕಾರಿ ಬಸ್ಸುಗಳು ಮಂಜೂರಾಗಿವೆ. ಮುಂದಿನ ಮೇ ತಿಂಗಳೊಳಗೆ ಶೇ.50ರಷ್ಟು ಬಸ್ಸುಗಳು ಬರಲಿದ್ದು, ಬಳಿಕದ 3 ತಿಂಗಳಲ್ಲಿ ಉಳಿದ ಬಸ್ಸುಗಳು ಬರಲಿವೆ. ಬಸ್ಸು ಚಾಲಕರ ನೇಮಕಾತಿಯೂ ನಡೆದಿದ್ದು, ತರಬೇತಿ ನಡೆಯುತ್ತಿದೆ ಎಂದು ತಿಳಿಸಿದರು.