123 ಪ್ರಕರಣ ವಿಶೇಷ ಮಧ್ಯಸ್ಥಿಕೆಯಲ್ಲಿ ಇತ್ಯರ್ಥ

KannadaprabhaNewsNetwork |  
Published : Oct 11, 2025, 12:02 AM IST
10ಜಿಡಿಜಿ7  | Kannada Prabha

ಸಾರಾಂಶ

ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದ ಒಟ್ಟು 1379 ಪ್ರಕರಣಗಳಲ್ಲಿ 123 ಪ್ರಕರಣ ಇತ್ಯರ್ಥಗೊಂಡಿವೆ.

ಗದಗ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ(ಎಂಸಿಪಿಸಿ), ಭಾರತದ ಸರ್ವೋಚ್ಚ ನ್ಯಾಯಾಲಯದೊಂದಿಗೆ ವಿಶೇಷ ಮಧ್ಯಸ್ಥಿಕೆ ಅಭಿಯಾನ ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಾಚರಣೆಯಲ್ಲಿ ಜಿಲ್ಲೆಯ 123 ಪ್ರಕಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥವಾಗಿವೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಮಧ್ಯಸ್ಥಿಕೆ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದ್ದು, ಮಧ್ಯಸ್ಥಿಕೆ- ರಾಷ್ಚ್ರಕ್ಕಾಗಿ 90 ದಿನಗಳ ಕಾರ್ಯಾಚರಣೆ ಮೂಲಕ ಉಚ್ಚ ನ್ಯಾಯಾಲಯಗಳು ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮಧ್ಯಸ್ಥಿಕೆ ಪ್ರಕ್ರಿಯೆ ಜುಲೈ 1ರಿಂದ ಅಕ್ಟೋಬರ್‌ 6ರ ವರೆಗೆ ಆಯೋಜಿಸಲಾಗಿತ್ತು. ರಾಷ್ಟ್ರಕ್ಕಾಗಿ ವಿಶೇಷ ಅಭಿಯಾನದಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದ ಒಟ್ಟು 1379 ಪ್ರಕರಣಗಳಲ್ಲಿ 123 ಪ್ರಕರಣ ಇತ್ಯರ್ಥಗೊಂಡಿವೆ, 375 ವೈವಾಹಿಕ ವಿವಾದಗಳಲ್ಲಿ 288 ಪ್ರಕರಣಗಳು ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದಿದ್ದು, ಇವುಗಳ ಪೈಕಿ 6 ಪ್ರಕರಣಗಳು ಇತ್ಯರ್ಥವಾಗಿವೆ.

271 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ 45 ಪ್ರಕರಣಗಳು ಮಧ್ಯಸ್ಥಿಕೆಗೆ ಬಂದಿದ್ದು, 7 ಪ್ರಕರಣಗಳು ಇತ್ಯರ್ಥವಾಗಿವೆ. ಚೆಕ್‌ ಬೌನ್ಸ್‌ನ 2701 ಪ್ರಕರಣಗಳಲ್ಲಿ 309 ಮಧ್ಯಸ್ಥಿಕೆಗೆ ಬಂದಿದ್ದು, ಅದರಲ್ಲಿ 41 ಪ್ರಕರಣಗಳು ಮಧ್ಯಸ್ಥಿಕೆಯ ಮೂಲಕ ಬಗೆಹರಿದಿವೆ. 295 ಕ್ರಿಮಿನಲ್ ಕಾಂಪೊಂಡೆಬಲ್ ಪ್ರಕರಣಗಳಲ್ಲಿ 75 ಪ್ರಕರಣಗಳು ಮಧ್ಯಸ್ಥಿಕೆಗೆ ಬಂದಿದ್ದು, ಅದರಲ್ಲಿ 12 ಪ್ರಕರಣಗಳು ಸಂಧಾನವಾಗಿವೆ. ಅದೇ ರೀತಿ ಸಾಲ ವಸೂಲಾತಿ 478 ಪ್ರಕರಣಗಳಲ್ಲಿ 17 ಪ್ರಕರಣಗಳು ಮಧ್ಯಸ್ಥಿಕೆಗೆ ಬಂದಿದ್ದು, ಅದರಲ್ಲಿ 2 ಪ್ರಕರಣಗಳು ಇತ್ಯರ್ಥವಾಗಿವೆ. 2603 ಪಾಲುವಾಟ್ನಿ ವ್ಯಾಜ್ಯಗಳಲ್ಲಿ 293 ಪ್ರಕರಣಗಳು ಮಧ್ಯಸ್ಥಿಕೆಗೆ ಬಂದಿದ್ದು, ಅದರಲ್ಲಿ 33 ಪ್ರಕರಣಗಳು ಇತ್ಯರ್ಥವಾಗಿವೆ. ಇತರೆ 4214 ಸಿವಿಲ್ ವ್ಯಾಜ್ಯಗಳಲ್ಲಿ 336 ಪ್ರಕರಣಗಳು ಮಧ್ಯಸ್ಥಿಕೆಗೆ ಬಂದಿದ್ದು, ಅದರಲ್ಲಿ 22 ಪ್ರಕರಣಗಳು ಸಂಧಾನಗೊಂಡಿವೆ.ಈ ಅಭಿಯಾನದಲ್ಲಿ ಗದಗ ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಗೊಂಡಿರುತ್ತವೆ. ರಾಜ್ಯದ್ಯಂತ ಒಟ್ಟು 1386837 ಪ್ರಕರಣಗಳಲ್ಲಿ 5575 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ದಿವಾಣಿ ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ್ರ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!