ಕನ್ನಡಪ್ರಭ ವಾರ್ತೆ ಕಾರ್ಕಳ
ರಸ್ತೆಗಳು ಮತ್ತು ಸೇತುವೆಗಳು ಈ ಅನುದಾನದಲ್ಲಿ ಅಭಿವೃದ್ಧಿಗೊಂಡು ಸಾರ್ವಜನಿಕ ಸಂಚಾರಕ್ಕೆ ಇನ್ನಷ್ಟು ಅನುಕೂಲಕರವಾಗಲಿದೆ.
ಕಾರ್ಕಳ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಮಂಜೂರಾದ ಕಾಮಗಾರಿಗಳ ವಿವರ:ಮುದ್ರಾಡಿ - ಹೆಬ್ರಿ-ಬ್ರಹ್ಮಾವರ ರಾಜ್ಯ ಹೆದ್ದಾರಿ ಮುದ್ರಾಡಿ ಪೇಟೆಯಿಂದ ಜರುವತ್ತು ಸೇತುವೆ ವರೆಗೆ ರಸ್ತೆಯ ನವೀಕರಣಗೊಳಿಸಲು 120 ಲಕ್ಷ ರು., ಸುಬ್ರಹ್ಮಣ್ಯ-ಉಡುಪಿ ರಾಜ್ಯ ಹೆದ್ದಾರಿ-37ರ ಚೆಂಡೆ ಬಸದಿ ಕ್ರಾಸ್-ಬಜಗೋಳಿ ವರೆಗೆ ರಸ್ತೆಯನ್ನು ನವೀಕರಣಗೊಳಿಸಲು 150 ಲಕ್ಷ ರು., ಕಾಂಜರಕಟ್ಟೆ - ಇನ್ನಾ - ಸಾಂತೂರು ಕೊಪ್ಪ ಮುಂಡೂರು ಕಜೆಮಾರಿಗುಡಿ-ಸಚ್ಚರಿಪೇಟೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಗೊಳಿಸಲು 100 ಲಕ್ಷ ರು., ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯ ವಂಜಾರಕಟ್ಟೆಯಿಂದ ಬೋಪಾಡಿ ಸೇತುವೆ ವರೆಗೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು 180 ಲಕ್ಷ ರು., ಅಜೆಕಾರು-ಹೆರ್ಮುಂಡೆ-ಜಾರ್ಕಳ-ಕೆರವಾಶೆ ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲು 250 ರು., ದುರ್ಗಾ-ಮುಂಡ್ಲಿ-ಶಿರ್ಲಾಲು ಜಿಲ್ಲಾಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಲು 250 ಲಕ್ಷ ರು., ಮುಡಾರು ರಾಜ್ಯ ಹೆದ್ದಾರಿ ರಾಮೇರುಗುತ್ತು ಬಳಿ ಶಿಥಿಲಗೊಂಡಿರುವ ಕಿರಿದಾದ ಹಳೆಯ ಸೇತುವೆಯನ್ನು ಮರುನಿರ್ಮಿಸಲು 100 ಲಕ್ಷ ರು., ಬೆಳುವಾಯಿ-ಕಾಂತಾವರ-ಮಂಜರಪಲ್ಕೆ ಜಿಲ್ಲಾಮುಖ್ಯ ರಸ್ತೆಯಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡಿರುವ ಕಿರಿದಾದ ಸೇತುವೆಯನ್ನು (ಬರಬೈಲು) ಮರುನಿರ್ಮಿಸಲು 150 ಲಕ್ಷ ರು. ಬಿಡುಗಡೆ ಮಾಡಗಾಗಿದೆ ಎಂದು ಕಾರ್ಕಳ ವಿ. ಸುನೀಲ್ ಕುಮಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.