ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಅರಿತು ಅವುಗಳನ್ನು ಪಾಲಿಸೋಣ. ಡಾ.ಬಿ.ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ಮೂಲಕ ಯುವಕರು ಉತ್ತಮ ಜೀವನ ರೂಪಿಸಿಕೊಳ್ಳಲು ಕರೆ ನೀಡಿದರು.ಸಂವಿಧಾನ ನಮಗೆ ಉತ್ತಮ ಪ್ರಜಾಪ್ರಭುತ್ವ ರಚಿಸಲು ಮತದಾನ ಹಕ್ಕು ನೀಡಿದೆ. ಅದನ್ನು ಅರ್ಹರಿಗೆ ನೀಡಿ, ಅಂಬೇಡ್ಕರ್ ಅವರ ಆಶಯದಂತೆ ಮುಂದೆ ಸಾಗೋಣ ಎಂದರು.
ಭಾರತ ದೇಶದ ಅಭಿವೃದ್ಧಿ ಸಂಕೇತವೇ ಸಂವಿಧಾನವಾಗಿದೆ. ಇದರಲ್ಲಿ ಎಲ್ಲವು ಅಡಗಿದೆ ಎಂದ ಅವರು, ಇದೇ ಏ.೨೬ ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಎಲ್ಲರೂ ತಪ್ಪದೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಲು ಕೋರಿದರು.
ನ್ಯಾಯವಾದಿ ರಾಜಶೇಖರ ಮಾತನಾಡಿ, ೧೪ನೇ ಮಗನಾಗಿ ಏ.೧೪ ರಂದು ಜನಿಸಿದ ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣದಿಂದ ಏನೆಲ್ಲ ಸಾಧಿಸಬಹುದು ಎಂದು ದೇಶಕ್ಕೆ ತೋರಿಸಿಕೊಟ್ಟರು. ದೇಶದ ಪ್ರಥಮ ಕಾನೂನು ಸಚಿವರಾಗಿ ಕಾರ್ಯ ಮಾಡಿ, ಅಸಮಾನತೆಯಿಂದ ಸಮಾನತೆಯೆಡೆ ಸಮಾಜವನ್ನು ಸಾಗಿಸಲು ಶ್ರಮಿಸಿದ್ದಾರೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಸ್ವಾಗತಿಸಿದರು. ಇದೇ ವೇಳೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ದೇಯಲ್ಲಿ ವಿಜೇತ ಶಿಕ್ಷಕರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.