ಮಡಿಕೇರಿ ಗಾಂಧಿ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ 133ನೇ ಜಯಂತಿ

KannadaprabhaNewsNetwork |  
Published : Apr 15, 2024, 01:15 AM IST
ಚಿತ್ರ : 14ಎಂಡಿಕೆ3 :ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.   | Kannada Prabha

ಸಾರಾಂಶ

ಮಡಿಕೇರಿ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮ ಭಾನುವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಾಷ್ಟ್ರದಲ್ಲಿ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಅಪಾರ ಶ್ರಮ ಪಟ್ಟಿದ್ದಾರೆ. ಅಲ್ಲದೆ ಸಂವಿಧಾನ ರಚನೆ ಮಾಡುವಲ್ಲಿ ಅವರ ಪಾತ್ರ ಅವಿಸ್ಮರಣೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳನ್ನು ಮತ್ತು ಕರ್ತವ್ಯಗಳನ್ನು ಅರಿತು ಅವುಗಳನ್ನು ಪಾಲಿಸೋಣ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯುವ ಮೂಲಕ ಯುವಕರು ಉತ್ತಮ ಜೀವನ ರೂಪಿಸಿಕೊಳ್ಳಲು ಕರೆ‌ ನೀಡಿದರು.

ಸಂವಿಧಾನ ನಮಗೆ ಉತ್ತಮ ಪ್ರಜಾಪ್ರಭುತ್ವ ರಚಿಸಲು ಮತದಾನ ಹಕ್ಕು ನೀಡಿದೆ. ಅದನ್ನು ಅರ್ಹರಿಗೆ ನೀಡಿ, ಅಂಬೇಡ್ಕರ್ ಅವರ ಆಶಯದಂತೆ ಮುಂದೆ ಸಾಗೋಣ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ ಮಾತನಾಡಿ, ಸರ್ವ ಜನಾಂಗದ ಅಭಿವೃದ್ಧಿಗಾಗಿ ಹಗಲಿರುಳು ನಿರಂತರ ಕೆಲಸ ಮಾಡಿದವರು ಡಾ. ಅಂಬೇಡ್ಕರ್ ಎಂದರು.

ಭಾರತ ದೇಶದ ಅಭಿವೃದ್ಧಿ ಸಂಕೇತವೇ ಸಂವಿಧಾನವಾಗಿದೆ. ಇದರಲ್ಲಿ ಎಲ್ಲವು ಅಡಗಿದೆ ಎಂದ ಅವರು, ಇದೇ ಏ.೨೬ ರಂದು ಲೋಕಸಭಾ ಚುನಾವಣೆಯ‌ ಮತದಾನ ನಡೆಯಲಿದೆ. ಎಲ್ಲರೂ ತಪ್ಪದೆ ಮತಗಟ್ಟೆಗೆ ಆಗಮಿಸಿ‌ ಮತ ಚಲಾಯಿಸಲು ಕೋರಿದರು.

ಉಪವಿಭಾಗಾಧಿಕಾರಿ ವಿನಾಯಕ ನಾರ್ವೇ ಮಾತನಾಡಿ, ಡಾ. ಬಾಬಾ ಸಾಹೇಬ ಅಂಬೇಡ್ಕರ್ ಬಾಲ್ಯದ ಜೀವನದಲ್ಲಿ ಶಿಕ್ಷಣ ಪಡೆಯಲು ಅತೀವ ಕಷ್ಟ ಪಟ್ಟಿದ್ದಾರೆ. ಅವರ ಜನ್ಮ ದಿನಾಚರಣೆ ಇಂದು ಆಚರಿಸಿ ಮರೆಯಬಾರದು. ನಿರಂತರವಾಗಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ ಎಂದರು.

ನ್ಯಾಯವಾದಿ ರಾಜಶೇಖರ ಮಾತನಾಡಿ, ೧೪ನೇ‌ ಮಗನಾಗಿ ಏ.೧೪ ರಂದು ಜನಿಸಿದ ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣದಿಂದ ಏನೆಲ್ಲ ಸಾಧಿಸಬಹುದು ಎಂದು ದೇಶಕ್ಕೆ ತೋರಿಸಿಕೊಟ್ಟರು. ದೇಶದ ಪ್ರಥಮ ಕಾನೂನು ಸಚಿವರಾಗಿ ಕಾರ್ಯ ಮಾಡಿ, ಅಸಮಾನತೆಯಿಂದ ಸಮಾನತೆಯೆಡೆ ಸಮಾಜವನ್ನು ಸಾಗಿಸಲು ಶ್ರಮಿಸಿದ್ದಾರೆ ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಪರ ಜಿಲ್ಲಾಧಿಕಾರಿ ವೀಣಾ, ತಹಸೀಲ್ದಾರ್‌ ರಮೇಶಬಾಬು ಮತ್ತಿತರರು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ ಸ್ವಾಗತಿಸಿದರು. ಇದೇ ವೇಳೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ದೇಯಲ್ಲಿ ವಿಜೇತ ಶಿಕ್ಷಕರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''