ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಬಳಿಯ ಚಾಲುಕ್ಯ ವೃತ್ತದಿಂದ ಎಸ್ಬಿಐ ವೃತ್ತ ಮತ್ತು ಎಸ್ಬಿಐ ವೃತ್ತದಿಂದ ಹಲಸೂರು ಗೇಟ್ ಠಾಣೆವರೆಗಿನ ಮಾರ್ಗದಲ್ಲಿರುವ 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯ ನಿರ್ವಹಿಸುತ್ತಿಲ್ಲ! ಈ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಖುದ್ದು ಪರಿಶೀಲಿಸಿ, ಇದಕ್ಕೆ ಕಾರಣರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಆ.28ರಂದು ಕಾರಿನಲ್ಲಿ ಪ್ರಯಾಣಿಸುವ ವೇಳೆ ಹಲಸೂರು ಗೇಟ್ನಿಂದ ಎಸ್ಬಿಐ ವೃತ್ತದವರೆಗೆ 67 ದೀಪಗಳ ಪೈಕಿ 33 ಬಂದ್ ಆಗಿದ್ದವು. ಎಸ್ಬಿಐ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ 155 ದೀಪಗಳ ಪೈಕಿ 107 ಕಾರ್ಯ ನಿರ್ವಹಿಸುತ್ತಿರಲಿಲ್ಲ. ವಿದ್ಯುತ್ ದೀಪಗಳ ಕುರಿತು ಈಗಾಗಲೇ 2 ಬಾರಿ ಸಭೆ ನಡೆಸಲಾಗಿದೆ. ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಆದರೂ, ಮೆಜೆಸ್ಟಿಕ್ಗೆ ಸಂಪರ್ಕಿಸುವ ರಸ್ತೆ, ನ್ಯಾಯಾಲಯ ಸಂಕೀರ್ಣ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿವಾಸ ಸೇರಿದಂತೆ ನೂರಾರು ವಾಹನಗಳು ಸಂಚರಿಸುವ ರಸ್ತೆಯಲ್ಲೇ ಬೀದಿ ದೀಪಗಳ ನಿರ್ವಹಣೆ ಲೋಪವಿರುವುದು ಸ್ಪಷ್ಟವಾಗಿದೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಜಿಬಿಎ ಮುಖ್ಯ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.ಜವಾಬ್ದಾರಿ, ಹೊಣೆಗಾರಿಕೆ ಇಲ್ಲ: