31ರಂದು ಮೀನು ಮಾರಾಟ ಫೆಡರೇಶನ್‌ನಿಂದ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jan 31, 2026, 02:45 AM IST
ಪತ್ರಿಕಾಗೋಷ್ಠಿ ಸಂದರ್ಭ | Kannada Prabha

ಸಾರಾಂಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್‍ಯಕ್ರಮ ಜ. 31ರಂದು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಆಯೋಜಿಸಿರುವುದಾಗಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್‍ಯಕ್ರಮ ಜ. 31ರಂದು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಆಯೋಜಿಸಿರುವುದಾಗಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.ಸಮಾರಂಭವನ್ನು ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಉದ್ಘಾಟಿಸಲಿದ್ದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವರು.ಸಮಾರಂಭದಲ್ಲಿ 2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಕಂಚಿನ ಪದಕ ವಿಜೇತ ಕ್ರೀಡಾ ಸಾಧಕಿ ರಿಮ ರಾವ್ ಯು.ಬಿ. ಅವರನ್ನು ಸನ್ಮಾನಿಸಲಾಗುವುದು.ಮುಖ್ಯ ಅತಿಥಿಯಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ಮತ್ಸ್ಯೋದ್ಯಮಿಗಳಾದ ಆನಂದ ಪಿ. ಸುವರ್ಣ, ಸಾಧು ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಕರ್ಕೇರ ಭಾಗವಹಿಸುವರು ಎಂದು ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟಿಬಿ ಗೇಟ್‌ ಬದಲಿಸಲು ಹಣ ಕೊಡಿ : ಬಿವೈವಿ
ರಾಯ್‌ ಸಾವಿಗೆ ಐ.ಟಿ. ಕಿರುಕುಳ ಕಾರಣ : ಬಾಬು