ಕನ್ನಡಪ್ರಭ ವಾರ್ತೆ ಮೈಸೂರು
ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್ ಸಮಿತಿಯ ಮತದಾರರ ದಿನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿಯ ಮತದಾರರ ದಿನ ವಿಶೇಷವಾಗಿರಲಿದೆ. ದಿನಾಚರಣೆ ಅರ್ಥಪೂರ್ಣವಾಗಿರುವುದರೊಂದಿಗೆ ಯುವ ಮತದಾರರಲ್ಲಿ ಮತದಾನದ ಬಗೆಗೆ ಹುಮ್ಮಸ್ಸು ಹಾಗೂ ಜಾಗೃತಿ ಮೂಡಿಸುವಂತಿರಬೇಕು ಎಂದರು.
ಅಂದು ಬೆಳಗ್ಗೆ 10 ಗಂಟೆಗೆ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು ಜಿಲ್ಲಾ ನ್ಯಾಯಾಧೀಶರು, ಜಿಲ್ಲಾಧಿಕಾರಿ ಹಾಗೂ ಚುನಾವಣಾ ರಾಯಭಾರಿಗಳಾದ ಜಾವಗಲ್ ಶ್ರೀನಾಥ್, ಪೊಲೀಸ್ ಆಯುಕ್ತರು ಹಾಗೂ ಚುನಾವಣಾ ಐಕಾನ್ ಗಳನ್ನು ಆಹ್ವಾನಿಸಲಾಗುವುದು. ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸುವುದಾಗಿ ಅವರು ಹೇಳಿದರು.ಕಾರ್ಯಕ್ರಮದಲ್ಲಿ ಮತದಾನದ ಜಾಗೃತಿಯ ಬಗೆಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ನವ ಮತದಾರರಿಗೆ ಬಹುಮಾನ ವಿತರಿಸಲಾಗುವುದು.
ಕಾರ್ಯಕ್ರಮದ ಯಶಸ್ಸಿಗೆ ಎನ್.ಸಿ.ಸಿ, ಎನ್.ಎಸ್.ಎಸ್, ವೈದ್ಯಕೀಯ ಕಾಲೇಜು, ಎಂಜನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್, ಚುನಾವಣಾ ಸಾಕ್ಷರತಾ ಕ್ಲಬ್ಗಳ ಸದಸ್ಯರು, ಪ್ಯಾರಾಮೆಡಿಕಲ್ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ತೊಡಗಿಸಿಕೊಂಡು ಕಾರ್ಯಕ್ರಮ ಯಶಸುಗೊಳಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ನಗರ ಪಾಲಿಕೆ ಆಯುಕ್ತ ಅರ್ಶಾದ್ ಉಲ್ಲಾ ರೆಹಮಾನ್ ಷರೀಫ್, ಉಪ ಆಯುಕ್ತ ಸೋಮಶೇಖರ್, ತೋಟಗಾರಿಕೆ ಇಲಾಖೆಯ ಶಾಂತಾ, ಚುನಾವಣಾ ಶಿರಸ್ತೇದಾರ್ ಸುರೇಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.