ಚಿರತೆ ದಾಳಿಯಿಂದ ಬಲಿಯಾದ ಮಹಿಳೆ ಕುಟುಂಬಕ್ಕೆ 15 ಲಕ್ಷ ರು. ಪರಿಹಾರ

KannadaprabhaNewsNetwork |  
Published : Jan 14, 2026, 02:30 AM IST
13 ಟಿವಿಕೆ 1 – ತುರುವೇಕೆರೆ ತಾಲೂಕು ಅರೇಮಲ್ಲೇನಹಳ್ಳಿಯಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಸುಜಾತಾರ ಕುಟುಂಬದ ಸದಸ್ಯರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ 15 ಲಕ್ಷ ರೂಗಳ ಅನುಗ್ರಹ ಪೂರಕ ಚೆಕ್ ವಿತರಿಸಿದರು. | Kannada Prabha

ಸಾರಾಂಶ

ಚಿರತೆ ದಾಳಿಯಿಂದ ಮೃತಪಟ್ಟಿದ್ದ ತಾಲೂಕಿನ ಅರೇಮಲ್ಲೇನಹಳ್ಳಿಯ ಸುಜಾತರವರ ಕುಟುಂಬಕ್ಕೆ ಅರಣ್ಯ ಇಲಾಖೆಯ ವತಿಯಿಂದ ಮಂಗಳವಾರ 15 ಲಕ್ಷ ರು. ಪರಿಹಾರದ ಚೆಕ್ ನ್ನು ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಂಬದ ಸದಸ್ಯರಿಗೆ ನೀಡಿದರು.

ಕನ್ನಡಪ್ರಭ ವಾರ್ತೆ ತುರುವೇಕೆರೆ

ಚಿರತೆ ದಾಳಿಯಿಂದ ಮೃತಪಟ್ಟಿದ್ದ ತಾಲೂಕಿನ ಅರೇಮಲ್ಲೇನಹಳ್ಳಿಯ ಸುಜಾತರವರ ಕುಟುಂಬಕ್ಕೆ ಅರಣ್ಯ ಇಲಾಖೆಯ ವತಿಯಿಂದ ಮಂಗಳವಾರ 15 ಲಕ್ಷ ರು. ಪರಿಹಾರದ ಚೆಕ್ ನ್ನು ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಂಬದ ಸದಸ್ಯರಿಗೆ ನೀಡಿದರು.

ಅರೇಮಲ್ಲೇನಹಳ್ಳಿಯ ಸುಜಾತಾರವರು ಡಿ. 21 ರಂದು ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುವಾಗ ಹಾಡುಹಗಲೇ ಚಿರತೆ ದಾಳಿ ಮಾಡಿ ಅವರನ್ನು ಕೊಂದು ಹಾಕಿತ್ತು. ಅದೇ ದಿನ ಅರಣ್ಯ ಇಲಾಖಾ ವತಿಯಿಂದ ಮೃತರ ಕುಟುಂಬಕ್ಕೆ 20 ಲಕ್ಷ ರು.ಗಳ ಧನ ಸಹಾಯವನ್ನು ಮಾಡಲಾಗುವುದೆಂದು ಘೋಷಿಸಲಾಗಿತ್ತು. ಮೊದಲ ಕಂತಾಗಿ 5 ಲಕ್ಷ ರು.ಗಳ ಚೆಕ್ ಮೂಲಕ ನೀಡಲಾಗಿತ್ತು. ಮಂಗಳವಾರ ಮೃತರ ಮನೆಗೆ ತೆರಳಿದ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಚೆಕ್ ನ್ನು ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಎಂ.ಟಿ.ಕೃಷ್ಣಪ್ಪ ಐದು ವರ್ಷದ ಅವಧಿಯ ವರೆಗೆ ಸುಜಾತಾರ ಮಗನಿಗೆ ಪ್ರತಿ ತಿಂಗಳು 4 ಸಾವಿರ ರು.ನಂತೆ ಆತನ ಶೈಕ್ಷಣಿಕ ಉದ್ದೇಶಕ್ಕಾಗಿ ನೀಡಲಾಗುವುದು. ಮೃತಳ ಮಗಳಿಗೆ ಮುಂಬರುವ ದಿನಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಿಪಟೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಿ.ಭರತ್, ಚಿಕ್ಕನಾಯಕನಹಳ್ಳಿ ಅರಣ್ಯ ವಲಯ ಅರಣ್ಯಾಧಿಕಾರಿ ಎಚ್.ಕೆ. ಅಮಿತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್, ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ, ಗ್ರಾಮದ ಮುಖಂಡರಾದ ಆರ್.ಲಕ್ಷ್ಮಣ್, ಜಯರಾಮ್, ಕುಮಾರ್, ಗಗನ್, ತ್ಯಾಗರಾಜು, ವಿಜಯೇಂದ್ರ, ಮಂಗೀಕುಪ್ಪೆ ಬಸವರಾಜು, ಮಾದಿಹಳ್ಳಿ ಕಾಂತರಾಜು, ಹುಲಿಕಲ್ ಲೋಕೇಶ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ