ತಿಳುವಳಿಕೆ ಪತ್ರ ವಿತರಣೆ
-ಪಿಎಂಎವೈ(ಜೆ) ಅಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಮನೆ ಮಂಜೂರು
------ಕನ್ನಡಪ್ರಭ ವಾರ್ತೆ ಭಾಲ್ಕಿ
ಅವರು ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ತಾಲೂಕಿನ ಗ್ರಾಮೀಣ ಭಾಗದ 665 ಜನರಿಗೆ 2024-25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿಎಂಎವೈ(ಜಿ) ಅಡಿಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು.
ಸಾಮಾನ್ಯ ಜನರಿಗೆ ಮೊದಲನೇ ಕಂತಿನಲ್ಲಿ 30ಸಾವಿರ ರು,, ಎರಡನೇ ಕಂತಿನದಲ್ಲಿ 60ಸಾವಿರ ರು,, ಮೂರನೇ ಕಂತಿನಲ್ಲಿ 30 ಸಾವಿರ ರು., ಒಟ್ಟು 1,20,000ರು., ಹಣವನ್ನು ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊದಲನೇ ಕಂತಿನಲ್ಲಿ 43,750ರು., ಎರಡನೇ ಕಂತಿನಲ್ಲಿ 87,500ರು., ಮೂರನೇ ಕಂತಿನಲ್ಲಿ 43,750 ರುಪಾಯಿಗಳನ್ನು ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದರು.ಫಲಾನುಭವಿ ಖಾತೆಗೆ ನೇರ ಹಣ ಜಮೆ:
ಮಧ್ಯವರ್ತಿಗಳನ್ನು ನಂಬಬೇಡಿ, ಅನುದಾನವು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದೆ. ಮೊದಲ ಕಂತು ಜಮೆಯಾದ ತಕ್ಷಣವೇ ಮನೆ ಕಾಮಗಾರಿ ಆರಂಭಿಸತಕ್ಕದ್ದು. ಭಾಲ್ಕಿ ತಾಲೂಕಿನ ಗ್ರಾಮಾಂತರ ವ್ಯಾಪ್ತಿಗೆ ಒಟ್ಟು 3 ಸಾವಿರ ಮನೆ ಮಂಜೂರಾಗಿದ್ದು, ಈ ಪೈಕಿ ಮೊದಲ ಹಂತದ 665 ಫಲಾನುಭವಿಗಳಿಗೆ ಇಂದು ತಿಳುವಳಿಕೆ ಪತ್ರ ನೀಡಲಾಗುತ್ತಿದೆ ಎಂದರು. ಅದೇ ರೀತಿ ಗ್ರಾಮೀಣ ಭಾಗದಲ್ಲಿ ಇನ್ನೂ ವಸತಿ ರಹಿತರ ಗುರುತಿಸುವಿಕೆ ಕಾರ್ಯ ನಡೆಯುತ್ತಿದ್ದು, ಅಂತವರಿಗೆ ಮುಂದಿನ ಸಮಯದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿವಾರು ಫಲಾನುಭವಿಗಳಿಗೆ ತಿಳುವಳಿಕೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
----ಫೋಟೊ: ಭಾಲ್ಕಿ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ಗ್ರಾಮೀಣ 665 ಜನರಿಗೆ ತಿಳುವಳಿಕೆ ಪತ್ರ ವಿತರಿಸಲಾಯಿತು.
ಫೈಲ್ 6ಬಿಡಿ4