ಕಾರವಾರ: ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಮೂರು ತಲೆಮಾರಿನ ದಾಖಲೆಯ ಷರತ್ತು ಕೈಬಿಡಿ. ಅರಣ್ಯ ಭೂಮಿ ಹಕ್ಕು ನೀಡಿ ಎಂಬ ಶಿರೋನಾಮೆ ರಾಜ್ಯಾದಂತ ಅರಣ್ಯವಾಸಿಗಳ ಕಾನೂನು ಜಾಗೃತಿ ಜಾಥಾ ಫೆ. ೧೫ರಿಂದ ೩೩ ದಿನಗಳ ಕಾಲ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅರಣ್ಯವಾಸಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿ, ಅರಣ್ಯವಾಸಿಗಳ ಜಾಥವು ಜಿಲ್ಲೆಯ ೧೬೩ ಗ್ರಾಪಂ ವ್ಯಾಪ್ತಿಯೊಂದಿಗೆ ರಾಜ್ಯದ ೧೬ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.ರಾಜ್ಯಾದಂತ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಕಳೆದ ೩೩ ವರ್ಷದಿಂದ ಸಾಂಘಿಕ ಮತ್ತು ಕಾನೂನತ್ಮಕ ವಿವಿಧ ರೀತಿಯ ಹೋರಾಟದ ಹಿನ್ನಲೆ ಅರಣ್ಯವಾಸಿಗಳ ಜಾಥಾವು ಅರಣ್ಯವಾಸಿಗಳ ಕಾನೂನು ಜ್ಞಾನವನ್ನು ಹೆಚ್ಚಿಸುವ ಚಿಂತನೆಯನ್ನು ಇಟ್ಟುಕೊಳ್ಳಲಾಗಿದೆ.
ಜಿಲ್ಲಾ ಸಂಚಾಲಕ ಇಬ್ರಾಹಿಂ ಗೌಡಳ್ಳಿ, ಕುಮಟಾ ಅಧ್ಯಕ್ಷ ಮಂಜುನಾಥ ಮರಾಠಿ, ಯಲ್ಲಾಪುರ ಅಧ್ಯಕ್ಷ ಭೀಮಶಿ ವಾಲ್ಮೀಕಿ, ಗ್ರೀನ್ ಕಾರ್ಡ್ ಪ್ರಮುಖರಾದ ಅಮೋಸ ಈದಾ, ಪೆಂಚಲಯ್ಯ ಕೊಸಿನಪೊಗು ಮುಂತಾದವರು ಇದ್ದರು.
ನಾಳೆ ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯಕಾರವಾರ: ಹೆಸ್ಕಾಂ ಹೊನ್ನಾವರ ಉಪವಿಭಾಗದ ಗ್ರಾಮೀಣ ಶಾಖೆಯ ವಿವಿಧೆಡೆ ಫೆ. 12ರಂದು ವಿದ್ಯುತ್ ವ್ಯತ್ಯಯವಾಗಲಿದೆ.ಸಾಲ್ಕೋಡ, ಹಡಿನಬಾಳ, ಕಡ್ಲೆ ಮತ್ತು ಸುಬ್ರಹ್ಮಣ್ಯ ಫೀಡರ್ ವ್ಯಾಪ್ತಿಗಳಲ್ಲಿ ಹಾಗೂ ಪಟ್ಟಣ ಶಾಖೆಯ ಬಂದರು ರೋಡ್ ಫೀಡರ್ ವ್ಯಾಪ್ತಿಯಲ್ಲಿ ಹಾಗೂ ಪಟ್ಟಣ ಶಾಖೆಯ ಎಲ್ಐಸಿ, ಕೆಎಚ್ಬಿ ಕಾಲನಿ ಮತ್ತು ಕರ್ಕಿ ಫೀಡರ್ ವ್ಯಾಪ್ತಿಗಳಲ್ಲಿ ನಿರ್ವಹಣೆಯ ಇರುವುದರಿಂದ ಫೆ. 12ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.