ಅವಿಭಜಿತ ಕಡಬ, ಪುತ್ತೂರು ತಾಲೂಕುಗಳಲ್ಲಿ ೧೭೭ ಡೆಂಘೀ ಪ್ರಕರಣಗಳು ಪತ್ತೆ

KannadaprabhaNewsNetwork |  
Published : Jul 05, 2024, 12:52 AM IST
ಫೋಟೋ: ೪ಪಿಟಿಆರ್-ಡಾ. ದೀಪಕ್ ರೈ | Kannada Prabha

ಸಾರಾಂಶ

ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಘೀ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಘೀ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದರೆ ಊರಿನ ಕೆಲವು ಡೆಂಘೀ ಪ್ರಕರಣದ ರೋಗಿಗಳ ತೀವ್ರತೆ ತುಂಬಾ ಕಡಿಮೆ ಇದೆ. ಈವರೆಗೆ ಯಾವುದೇ ಡೆಂಘೀ ಸಾವಿನ ಪ್ರಕರಣ ವರದಿಯಾಗಿಲ್ಲ.

ಕನ್ನಡಪ್ರಭವಾರ್ತೆ ಪುತ್ತೂರು:

ಅವಿಭಜಿತ ತಾಲೂಕುಗಳಾದ ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸುಮಾರು ೧೭೭ ಡೆಂಘೀ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಸುಮಾರು ೭೬ ಪ್ರಕರಣಗಳು ಜೂನ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಎಲ್ಲ ೧೭೭ ಪ್ರಕರಣದಲ್ಲಿಯೂ ರೋಗಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪುತ್ತೂರು ಮತ್ತು ಕಡಬ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುವ ಮಳೆಯಿಂದಾಗಿ ಹೆಚ್ಚಾಗಿ ಡೆಂಘೀ ಸಂಬಂಧಿತ ಜ್ವರ ಕಾಣಿಸಿಕೊಳ್ಳುತ್ತವೆ. ಇದೀಗ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡಿರುವ ಡೆಂಘೀ ಪ್ರಕರಣಗಳಲ್ಲಿ ಎಲ್ಲ ರೋಗಿಗಳು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಆಧಾರ್ ಕಾರ್ಡ್‌ ವಿಳಾಸದ ಪ್ರಕಾರ ಅವರು ಪುತ್ತೂರು ಮತ್ತು ಕಡಬ ತಾಲೂಕಿಗೆ ಒಳಪಟ್ಟವರಾಗಿದ್ದಾರೆ. ಹಾಗಾಗಿ ಈ ಡೆಂಘೀ ಪ್ರಕರಣ ಪುತ್ತೂರು ಮತ್ತು ಕಡಬ ವ್ಯಾಪ್ತಿಗೆ ಒಳಪಡುತ್ತವೆ.

ಈಗಾಗಲೇ ಕಡಬ ಮತ್ತು ಪುತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಇದರಲ್ಲಿ ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಘೀ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಘೀ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದರೆ ಊರಿನ ಕೆಲವು ಡೆಂಘೀ ಪ್ರಕರಣದ ರೋಗಿಗಳ ತೀವ್ರತೆ ತುಂಬಾ ಕಡಿಮೆ ಇದೆ. ಈವರೆಗೆ ಯಾವುದೇ ಡೆಂಘೀ ಸಾವಿನ ಪ್ರಕರಣ ವರದಿಯಾಗಿಲ್ಲ.

ಪುತ್ತೂರು ತಾಲೂಕಿನಲ್ಲಿ ಖಚಿತವಾದ ೭ ಡೆಂಘೀ ಪ್ರಕರಣಗಳು ಇವೆ. ಉಳಿದಂತೆ ವೈರಲ್ ಫೀವರ್‌ಗೆ ಸಂಬಂಧಪಟ್ಟದ್ದಾಗಿವೆ. ಉಪ್ಪಿನಂಗಡಿ ನಗರ ಭಾಗಗಳಲ್ಲೂ ೩೫ ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಜನರು ಆದಷ್ಟು ಮನೆ ಪಕ್ಕ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಈಗಾಗಲೇ ಬೇರೆ ಬೇರೆ ಅಧಿಕಾರಿಗಳನ್ನು ನೇಮಿಸಿ ಮಾಹಿತಿ ನೀಡುವ ಕೆಲಸ ಆರಂಭಿಸಿದ್ದೇವೆ ಎಂದು . ಈ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ