11 ಗಂಟೆಯಲ್ಲಿ 18 ಎಕರೆ ಜಮೀನು ಬಿತ್ತನೆ; ರೈತನ ಸಾಧನೆ

KannadaprabhaNewsNetwork |  
Published : Jul 05, 2026, 03:00 AM IST
ರೈತ ದಂಪತಿಗೆ ಸನ್ಮಾನ | Kannada Prabha

ಸಾರಾಂಶ

ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ರೈತ ಮುಖಂಡರಾದ ಹಣಮಂತ್ರಾಯ ಮುಳಜಿ ಅವರ ಅಪೇಕ್ಷೆಯಂತೆ ಮತ್ತು ಅವರ ಆಸೆಯಂತೆ ಗ್ರಾಮದ ಅಶೋಕಗೌಡ ಪಾಟೀಲ ಅವರ ಜಮೀನಿನಲ್ಲಿ ರೈತ ಮಲ್ಲಪ್ಪ ರೊಟ್ಟಿ ಅವರು ಸತತ 11 ಗಂಟೆಯಲ್ಲಿ 18 ಎಕರೆ ಜಮೀನು ಬಿತ್ತನೆ ಮಾಡುವುದರ ಮೂಲಕ ಸಾಧನೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ದೇವರ ಹಿಪ್ಪರಗಿ

ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ರೈತ ಮುಖಂಡರಾದ ಹಣಮಂತ್ರಾಯ ಮುಳಜಿ ಅವರ ಅಪೇಕ್ಷೆಯಂತೆ ಮತ್ತು ಅವರ ಆಸೆಯಂತೆ ಗ್ರಾಮದ ಅಶೋಕಗೌಡ ಪಾಟೀಲ ಅವರ ಜಮೀನಿನಲ್ಲಿ ರೈತ ಮಲ್ಲಪ್ಪ ರೊಟ್ಟಿ ಅವರು ಸತತ 11 ಗಂಟೆಯಲ್ಲಿ 18 ಎಕರೆ ಜಮೀನು ಬಿತ್ತನೆ ಮಾಡುವುದರ ಮೂಲಕ ಸಾಧನೆ ಮಾಡಿದ್ದಾರೆ. ರೈತನ ಸಾಧನೆಗೆ ಸಂತಸಗೊಂಡ ಊರಿನ ರೈತರು ರೈತ ದಂಪತಿಯನ್ನು ಚಕ್ಕಡಿಬಂಡಿಯಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು.

ಪ್ರಗತಿ ಪರ ರೈತ, ಪಿಕೆಪಿಎಸ್ ಅಧ್ಯಕ್ಷರಾದ ನಾಗಣ್ಣ ಮುಳಜಿ ಅವರು ರೈತ ದಂಪತಿಯನ್ನು ತಮ್ಮ ಮನೆಗೆ ಕರಿಸಿ ಬಟ್ಟೆ ಆಹೇರಿ ಮಾಡಿ ಸತ್ಕರಿಸಿದರು. ಈ ಬೇಳೆ ಮಾತನಾಡಿದ ಅವರು, ರೈತನ ಸಾಧನೆಯಿಂದ ರೈತರಲ್ಲಿ ಹೊಸ ಹುರುಪು ಮೂಡಿಸಿದೆ. ಒಕ್ಕಲುತನದಿಂದ ದೂರ ಉಳಿಯುತ್ತಿರುವ ಇಂದಿನ ದಿನದಲ್ಲಿ ಯುವ ಸಮುದಾಯಕ್ಕೆ ಇದೊಂದು ಪ್ರೆರಣೆಯಾಗಿದೆ ಎಂದರು.

ಈ ವೇಳೆ ಊರಿನ ರೈತರಾದ ನಿಲಕಂಠ ಬೆನಕನಹಳ್ಳಿ, ಬಸವರಾಜ ಹೊಸಮನಿ, ಮಹಾಂತೇಶ ಉಡಗಿ, ಸಿಂಧೂರ ಪೂಜಾರಿ, ಲಗಮಣ್ಣ ಪೂಜಾರಿ, ಹಣಮಂತ ಕಂಬಾರ, ಭೀಮಾಶಂಕರ ಪ್ಯಾಟಿ, ದೇವಾನಂದ್ ಬಾಗಲಕೋಟ, ಗಂಗಪ್ಪ ಇಮ್ಮನ, ಮಹಾದೇವ ಕಡ್ಲೇವಾಡ, ಸಂತೋಷ ಹಾದಿಮನಿ, ಬಾಬು ಖೋಜೀಗಿರ, ಜಟ್ಟೇಪ್ಪ ಯಳಕೋಟಿ, ಸಿದ್ದು ಕಡ್ಲೇವಾಡ, ದಾನಪ್ಪಗೌಡ ಪಾಟೀಲ, ಮಂಜುನಾಥ ಬಾಗಲಕೋಟ, ಶಶಿಕಾಂತ ಚಕ್ಕಡಿ, ದೇವಾನಂದ ಉಡಗಿ, ಸಂತೋಷ ಸಿಂದಗಿ ಸೇರಿದಂತೆ ಹಲವರು ರೈತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಚಿ ಬೆಳೆದು ನಿಂತಲ್ಲೇ ನಿಂತ ಚರಂಡಿ ನೀರು
ಇಂದು ಯಾಳವಾರ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ಸುವರ್ಣ ಮಹೋತ್ಸವ