ಕನ್ನಡಪ್ರಭ ವಾರ್ತೆ ದೇವರ ಹಿಪ್ಪರಗಿ
ಪ್ರಗತಿ ಪರ ರೈತ, ಪಿಕೆಪಿಎಸ್ ಅಧ್ಯಕ್ಷರಾದ ನಾಗಣ್ಣ ಮುಳಜಿ ಅವರು ರೈತ ದಂಪತಿಯನ್ನು ತಮ್ಮ ಮನೆಗೆ ಕರಿಸಿ ಬಟ್ಟೆ ಆಹೇರಿ ಮಾಡಿ ಸತ್ಕರಿಸಿದರು. ಈ ಬೇಳೆ ಮಾತನಾಡಿದ ಅವರು, ರೈತನ ಸಾಧನೆಯಿಂದ ರೈತರಲ್ಲಿ ಹೊಸ ಹುರುಪು ಮೂಡಿಸಿದೆ. ಒಕ್ಕಲುತನದಿಂದ ದೂರ ಉಳಿಯುತ್ತಿರುವ ಇಂದಿನ ದಿನದಲ್ಲಿ ಯುವ ಸಮುದಾಯಕ್ಕೆ ಇದೊಂದು ಪ್ರೆರಣೆಯಾಗಿದೆ ಎಂದರು.
ಈ ವೇಳೆ ಊರಿನ ರೈತರಾದ ನಿಲಕಂಠ ಬೆನಕನಹಳ್ಳಿ, ಬಸವರಾಜ ಹೊಸಮನಿ, ಮಹಾಂತೇಶ ಉಡಗಿ, ಸಿಂಧೂರ ಪೂಜಾರಿ, ಲಗಮಣ್ಣ ಪೂಜಾರಿ, ಹಣಮಂತ ಕಂಬಾರ, ಭೀಮಾಶಂಕರ ಪ್ಯಾಟಿ, ದೇವಾನಂದ್ ಬಾಗಲಕೋಟ, ಗಂಗಪ್ಪ ಇಮ್ಮನ, ಮಹಾದೇವ ಕಡ್ಲೇವಾಡ, ಸಂತೋಷ ಹಾದಿಮನಿ, ಬಾಬು ಖೋಜೀಗಿರ, ಜಟ್ಟೇಪ್ಪ ಯಳಕೋಟಿ, ಸಿದ್ದು ಕಡ್ಲೇವಾಡ, ದಾನಪ್ಪಗೌಡ ಪಾಟೀಲ, ಮಂಜುನಾಥ ಬಾಗಲಕೋಟ, ಶಶಿಕಾಂತ ಚಕ್ಕಡಿ, ದೇವಾನಂದ ಉಡಗಿ, ಸಂತೋಷ ಸಿಂದಗಿ ಸೇರಿದಂತೆ ಹಲವರು ರೈತರು ಉಪಸ್ಥಿತರಿದ್ದರು.