ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ 18 ವಾಂತಿ ಭೇದಿ ಪ್ರಕರಣ ಪತ್ತೆ

KannadaprabhaNewsNetwork |  
Published : Apr 12, 2024, 01:03 AM IST
ಕೂಡ್ಲಿಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎ.ಡಿ.ಗುಡ್ಡ ಗೊಲ್ಲರಹಟ್ಟಿಯಲ್ಲಿ ವಾಂತಿ, ಭೇದಿ ಕಾಣಿಸಿಕೊಂಡ ಹಿನ್ನೆಲೆ ರೋಗಿಗಳು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಚಿಕಿತ್ಸೆಗೆ ದಾಖಲಾಗಿದ್ದಾರೆ. | Kannada Prabha

ಸಾರಾಂಶ

ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಕೂಡ್ಲಿಗಿ: ಪಪಂ ವ್ಯಾಪ್ತಿಯ 19ನೇ ವಾರ್ಡ್‌ನ ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ ಬುಧವಾರ 18ಕ್ಕೂ ಹೆಚ್ಚಿನ ಜನರಿಗೆ ವಾಂತಿ-ಭೇದಿಯಾಗಿದ್ದು, ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಈ ಪೈಕಿ 8-10 ವರ್ಷದವರು ಚಿಕ್ಕಮಕ್ಕಳು ಸೇರಿ ವೃದ್ಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ-ಭೇದಿ ಹರಡಲು ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಮರದೇವರಗುಡ್ಡ ಗೊಲ್ಲರಹಟ್ಟಿ ಗ್ರಾಮಕ್ಕೆ ವೈದ್ಯರು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಳುಹಿಸಿದ್ದು, ಸರ್ವೆ ಮಾಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚಿಕಿತ್ಸೆ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ