-ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿ.ಪ ಸದಸ್ಯ ಜಗದೇವ ಗುತ್ತೇದಾರ ಗುದ್ದಲಿ ಪೂಜೆ
ಕನ್ನಡಪ್ರಭ ವಾರ್ತೆ ಕಾಳಗಿ
ಭರತನೂರ ಗ್ರಾಮದಲ್ಲಿ ೨೦೨೪-೨೫ ಸಾಲಿನ ವಿಧಾನ ಪರಿಷತ್ ಸದಸ್ಯರ ಅನುದಾನದಡಿ ಭರತನೂರ ಗ್ರಾಮದ ಮುಖ್ಯ ರಸ್ತೆಯಿಂದ ಚಿಕ್ಕಗುರುನಂಜೇಶ್ವರ ಮಠದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಭರತನೂರ ಗ್ರಾಮದಲ್ಲಿ ರಸ್ತೆ ನಿರ್ಮಾಣಕ್ಕೆ ಯುವ ಮುಖಂಡ ಗೋವಿಂದರೆಡ್ಡಿ ತುಮಕುಂಟಿ ರಾಜಾಪೂರ ಭೂಮಿ ನೀಡಿದ್ದು ಶ್ಲಾಘನೀಯ. ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಭರತನೂರ ಗ್ರಾಮದ ಮುಖ್ಯ ರಸ್ತೆಯಿಂದ ಚಿಕ್ಕಗುರುನಂಜೇಶ್ವರ ಮಠದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ಬಡಾವಣೆಯಲ್ಲಿ ೮ ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ ಎಂದರು.
----
ಫೋಟೊ: ಚಿಕ್ಕಗುರುನಂಜೇಶ್ವರ ಮಠದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಭರತನೂರ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಮಾಜಿ ಜಿ.ಪಂ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ ಇದ್ದರು.