ಕನ್ನಡಪ್ರಭ ವಾರ್ತೆ ಮಡಿಕೇರಿರೂಂ ಬುಕ್ ಮಾಡುವ ನೆಪದಲ್ಲಿ ಮಡಿಕೇರಿ ನಗರದ ಹೊಟೇಲೊಂದರ ಮಾಲೀಕರಿಗೆ ಸೈಬರ್ ವಂಚಕರು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
20 ಸಾವಿರ ರು. ಬಂದಿರುವ ಬಗ್ಗೆ ಸ್ಕ್ರೀನ್ ಶಾಟ್ ಮೂಲಕ ಮನವರಿಕೆ ಮಾಡಿಕೊಂಡ ಮಾಲೀಕರು ಕರೆ ಮಾಡಿದಾತನಿಗೆ 18 ಸಾವಿರ ರು.ವನ್ನು ಮರಳಿಸಿದರು. ಸ್ವಲ್ಪ ಹೊತ್ತು ಕಳೆದ ನಂತರ ಅದೇ ವ್ಯಕ್ತಿಯ ಮೊಬೈಲ್ ಸಂಖ್ಯೆಯಿಂದ 27 ಸಾವಿರ ರು. ಪಾವತಿಯಾಗಿರುವ ಬಗ್ಗೆ ಸ್ಕ್ರೀನ್ಶಾಟ್ ಸಂದೇಶ ಬರುತ್ತದೆ. ಆತ ಮತ್ತೆ ಕರೆ ಮಾಡಿ ನಾನು ಯಾವುದೋ ಆಸ್ಪತ್ರೆಗೆ ಪಾವತಿಸಬೇಕಾದ ಹಣವನ್ನು ತಮಗೆ ತಪ್ಪಾಗಿ ಕಳುಹಿಸಿದ್ದೇನೆ, ಹಣವನ್ನು ಮರಳಿಸಿ ಎಂದು ಕೋರಿಕೆ ಇಟ್ಟಿದ್ದ.
ಇದರಿಂದ ಸಂಶಯಗೊಂಡ ಹೊಟೇಲ್ ಮಾಲೀಕರು ತಮ್ಮ ಖಾತೆಯನ್ನು ಪರಿಶೀಲಿಸಿದಾಗ ವಂಚಕ ವ್ಯಕ್ತಿ ಯಾವುದೇ ಹಣವನ್ನು ಪಾವತಿಸಿರುವುದಿಲ್ಲ. 20 ಸಾವಿರ ರು. ಮತ್ತು 27 ಸಾವಿರ ರು. ಪಾವತಿಸಿರುವುದು ಸುಳ್ಳೆಂದು ಮನವರಿಕೆಯಾಗುತ್ತದೆ. ತಮ್ಮ ಖಾತೆಯಿಂದ 18 ಸಾವಿರ ರು. ಕಳೆದುಕೊಂಡಿರುವುದು ಖಾತ್ರಿಯಾದ ತಕ್ಷಣ ವಂಚಕ ಕರೆ ಮಾಡಿದ ಮತ್ತು ಹಣದ ವ್ಯವಹಾರದ ಸ್ಕ್ರೀನ್ ಶಾಟ್ ಕಳುಹಿಸಿದ ಎರಡೂ ಮೊಬೈಲ್ ಸಂಖ್ಯೆಗೆ ಕರೆ ಮಾಡುತ್ತಾರೆ. ಆದರೆ ಯಾವ ಸಂಖ್ಯೆಯೂ ಕಾರ್ಯನಿರ್ವಹಿಸಲಿಲ್ಲ.ತಕ್ಷಣ ಎಚ್ಚೆತ್ತುಕೊಂಡ ಹೊಟೇಲ್ ಮಾಲೀಕರು ತಮಗಾದ ವಂಚನೆ ಬಗ್ಗೆ ಕೊಡಗು ಜಿಲ್ಲಾ ಸೈಬರ್ ಅಪರಾಧ ಪತ್ತೆದಳಕ್ಕೆ ದೂರು ಸಲ್ಲಿಸಿದ್ದಾರೆ.