ಮುಂಡರಗಿ: ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಶಾಂತಿಯುತವಾಗಿ ಪ್ರಾರಂಭವಾಗಿವೆ. ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 2022 ಮಕ್ಕಳಲ್ಲಿ 52 ಮಕ್ಕಳು ಗೈರು ಹಾಜರಾಗಿದ್ದು, 1970 ಮಕ್ಕಳು ಬರೆದಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ: ಡಂಬಳದ ಜಗದ್ಗುರು ತೋಂಟದಾರ್ಯ ಬಾಲಕಿಯರ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಅಜ್ಜಿಯ ಸಾವಿನ ದುಃಖದಲ್ಲೂ ಶುಕ್ರವಾರ ಪರೀಕ್ಷೆ ಬರೆದಿದ್ದಾಳೆ.
ವಿದ್ಯಾರ್ಥಿನಿ ಜಲಜಾಕ್ಷಿ ಕಿಲಾರಿ ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಬರೆಯಲು ಮೊದಲಿನಿಂದಲೂ ಓದಿ ಸಿದ್ಧವಾಗಿದ್ದಳು. ಆದರೆ ವಿಧಿಯ ಆಟ ಮನೆಯಲ್ಲಿ ಅವಳ ಅಜ್ಜಿ ಗಂಗಮ್ಮ ಕಿಲಾರಿ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ದುಃಖದ ವಾತಾವರಣದಲ್ಲಿ ಪರೀಕ್ಷೆಗೆ ಬರಲು ಭಯಭೀತಳಾಗಿ ಮಾನಸಿಕವಾಗಿ ಗೊಂದಲದ್ದಾಗ ವಿದ್ಯಾರ್ಥಿನಿಗೆ ಮನೆಯ ಪಾಲಕರು ಹಾಗೂ ಶಾಲೆಯ ಶಿಕ್ಷಕರು ಮತ್ತು ಅವಳ ಸಹಪಾಠಿಗಳು ಶಾಲೆಗೆ ಕರೆದುಕೊಂಡು ಬಂದು ಧೈರ್ಯ ತುಂಬಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿ ಎ.ಬಿ. ಬೇವಿನಕಟ್ಟಿ, ಸಂಜುತ ಸಂಕಣ್ಣವರ್, ಎಸ್.ಎಂ. ಹಂಚಿನಾಳ, ಬೂದಪ್ಪ ಅಂಗಡಿ, ಎಸ್.ಎಸ್. ತಿಮ್ಮಾಪುರ, ಎಂ.ಎಂ. ಗೌಳೆರ ಎಲ್ಲ ಶಿಕ್ಷಕರು ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಗೆ ಹೋಗಿ ಧೈರ್ಯ ತುಂಬಿದ್ದಾರೆ.