ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಟೂಲ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ,
ಕಾರ್ಮಿಕ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕಿಯೆಯನ್ನು ಸಹ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಕಾಮಗಾರಿಯನ್ನು ಆರಂಭಿಸಲಾಗುತ್ತದೆ ಎಂದರುಕಾರ್ಮಿಕರಿಗೆ ಟೂಲ್ ಕಿಟ್
ಎಲ್ಲ ಕಾರ್ಮಿಕರು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಕಾಣಬೇಕು. ದೇಶದ ನಿರ್ಮಾಣ ಕಾರ್ಯದಲ್ಲಿ ಕಟ್ಟಡ ಕಾರ್ಮಿಕರ ಪಾತ್ರ ಮಹತ್ತರವಾದದ್ದು. ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರಿಗೆ ಹೆರಿಗೆ ಭತ್ಯೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಧನ ಸಹಾಯ, ಅನಾರೋಗ್ಯ ಪೀಡಿತರಿಗೆ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು, ದೈಹಿಕ ಅಂಕವಿಕಲತೆ ಉಂಟಾದರೆ ಸಹಾಯ ಧನ ನೀಡಲಾಗುವುದು ಎಂದರು.
ಪಿಂಚಣಿ ಸೌಲಭ್ಯ ಹೀಗೆ ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬ ಕಟ್ಟಡ ಕಾರ್ಮಿಕರೂ ಸಹ ವಿಮಾ ಸೌಲಭ್ಯವನ್ನು ಪಡೆಯಬೇಕು. ಈಗ ಹೊಸದಾಗಿ ಕಟ್ಟಡ ಮತ್ತು ಕಾರ್ಮಿಕರ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ, ಕಾರ್ಮಿಕ ಗೃಹ ನಿರ್ಮಾಣ ಎಂಬ ಇಲಾಖೆ ಮಾಡಲಾಗಿದೆ. ವಸತಿರಹಿತ ಕಾರ್ಮಿಕರಿಗೆ ಗೃಹ ನಿರ್ಮಾಣವನ್ನು ಮಾಡಿಕೊಡಲಾಗುವುದು. ಎಲ್ಲರೂ ಸಹ ತಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸವನ್ನು ನೀಡಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.