ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಗೋಪಾಲಗೌಡ ಬಡಾವಣೆ ಕೃಷ್ಣ ಮಠದ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಬ್ಯಾಂಕ್ ಉದ್ಯೋಗಿ ಕೃಷ್ಣಪ್ಪ ಎಂಬವರ ಮನೆಯಲ್ಲಿ ಸಿಲಿಂಡರ್ಗಳ ಸ್ಫೋಟ ಸಂಭವಿಸಿದೆ. ಅವಘಡ ಸಂಭವಿಸಿದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ಮನೆ ಒಳಗಡೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸುತ್ತಮುತ್ತಲಿನ ನಿವಾಸಿಗಳು, ಅಗ್ನಿಶಾಮಕ ದಳಕ್ಕೆ ಕೂಡಲೇ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಮುಂದಾಗಿದ್ದರು. ಇದೇ ವೇಳೆಯೇ, ಮನೆಯಲ್ಲಿದ್ದ ಮತ್ತೊಂದು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಮನೆ ಗೋಡೆಯೊಂದು ಛಿದ್ರಛಿದ್ರವಾಗಿದೆ. ಜೊತೆಗೆ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಮನೆಯೊಳಗಿದ್ದ ಮತ್ತೆರೆಡು ಸಿಲಿಂಡರ್ಗಳನ್ನು ಹೊರತರುವಲ್ಲಿ ಸಫಲರಾಗಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.ಸಿಲಿಂಡರ್ನಲ್ಲಿನ ಗ್ಯಾಸ್ ಸೋರಿಕೆಯಿಂದ ಈ ಸ್ಫೋಟ ಸಂಭವಿಸಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಘಟನೆಗೆ ಸ್ಪಷ್ಟ ಕಾರಣವೇನು, ಹಾನಿಗೀಡಾದ ವಸ್ತುಗಳ ಮೌಲ್ಯವೆಷ್ಟು ಎಂಬುವುದು ಸ್ಪಷ್ಟವಾಗಬೇಕಾಗಿದೆ.
- - - -28ಎಸ್ಎಂಜಿಕೆಪಿ01: