ಅಪಘಾತದಲ್ಲಿ ಮೃತರ ಕುಟುಂಬಕ್ಕೆ ₹೨ ಲಕ್ಷ ಪರಿಹಾರ: ಶಾಸಕ ಜಿ.ಎಸ್. ಪಾಟೀಲ

KannadaprabhaNewsNetwork |  
Published : Feb 07, 2026, 03:30 AM IST
ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳಿದ ಶಾಸಕ ಜಿ.ಎಸ್. ಪಾಟೀಲ. | Kannada Prabha

ಸಾರಾಂಶ

ಶಾಸಕ ಜಿ.ಎಸ್. ಪಾಟೀಲ ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸರ್ಕಾರದಿಂದ ಮೃತಪಟ್ಟ ಕುಟುಂಬಸ್ಥರಿಗೆ ₹೨ ಲಕ್ಷ ಹಾಗೂ ಗಾಯಾಳುಗಳ ಚಿಕಿತ್ಸೆಗಾಗಿ ₹೫೦ ಸಾವಿರ ಪರಿಹಾರ ನೀಡಲಾಗುವುದು ಎಂದರು.

ಗಜೇಂದ್ರಗಡ: ರೋಣ ಸಮೀಪದ ಜಿಗಳೂರು ಕ್ರಾಸ್ ಬಳಿ ಗುರುವಾರ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ನಿವಾಸಿಗಳ ಮನೆಗೆ ಶುಕ್ರವಾರ ಸಂಜೆ ಶಾಸಕ ಜಿ.ಎಸ್. ಪಾಟೀಲ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕೂಲಿ ಕೆಲಸ ಮಾಡಿಕೊಂಡು ನಮ್ಮನ್ನು ಹಾಗೂ ಮನೆಯನ್ನು ಮುನ್ನಡೆಸುತ್ತಿದ್ದ ಜೀವವನ್ನು ಕಳೆದುಕೊಂಡ ಮನೆಯವರನ್ನು ನೆನಸಿಕೊಂಡ ಕುಟುಂಬಸ್ಥರು ಕಣ್ಣೀರು ಸುರಿಸಿದರು. ಶಾಸಕ ಜಿ.ಎಸ್. ಪಾಟೀಲ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸರ್ಕಾರದಿಂದ ಮೃತಪಟ್ಟ ಕುಟುಂಬಸ್ಥರಿಗೆ ₹೨ ಲಕ್ಷ ಹಾಗೂ ಗಾಯಾಳುಗಳ ಚಿಕಿತ್ಸೆಗಾಗಿ ₹೫೦ ಸಾವಿರ ಪರಿಹಾರ ನೀಡಲಾಗುವುದು ಎಂದರು.

ಈ ವೇಳೆ ಅಪಘಾತದಲ್ಲಿ ಗಾಯಾಳುಗಳ ಕುಟುಬಸ್ಥರು ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಾಗ ಶಾಸಕರು ಜಿಮ್ಸ್ ಮುಖ್ಯಸ್ಥರಿಗೆ ದೂರವಾಣಿ ಮೂಲಕ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಗಾಯಾಳುಗಳ ಕುಟುಂಬಸ್ಥರು ದೂರುತ್ತಿದ್ದಾರೆ. ಹೀಗಾಗಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.ಈ ವೇಳೆ ಶಿವರಾಜ ಘೋರ್ಪಡೆ, ರಾಜು ಸಾಂಗ್ಲೀಕರ, ಮುರ್ತುಜಾ ಡಾಲಾಯತ, ಎಸ್.ಆರ್. ರಾಮಜಿ, ಸಿದ್ದಪ್ಪ ಬಂಡಿ, ಎಚ್.ಎಸ್. ಸೋಂಪುರ, ಶ್ರೀಧರ ಬಿದರಳ್ಳಿ, ಪರಶುರಾಮ ಚಿಟಗಿ, ಎ.ಡಿ. ಕೋಲಕಾರ, ಅರ್ಜುನ ರಾಠೋಡ, ಹಸನ ತಟಗಾರ, ಶ್ರೀಧರ ಗಂಜಿಗೌಡರ, ಸಿದ್ದು ಗೊಂಗಡಶೆಟ್ಟಿಮಠ, ದಾವಲ ತಾಳಿಕೋಟಿ, ಸುರೇಶ ಚವಡಿ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ