ಬೆಂಗಳೂರಿನಿಂದ ಹುಬ್ಬಳ್ಳಿ, ಮೈಸೂರು ನಡುವಿನ 2 ರೈಲುಗಳ ಸಂಚಾರ ರದ್ದು

KannadaprabhaNewsNetwork |  
Published : Apr 02, 2024, 02:25 AM ISTUpdated : Apr 02, 2024, 05:41 AM IST
ರೈಲು | Kannada Prabha

ಸಾರಾಂಶ

ನೈಋತ್ಯ ರೈಲ್ವೆ, ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು - ಹುಬ್ಬಳ್ಳಿ, ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ಎರಡು ರೈಲುಗಳನ್ನು ಎರಡು ದಿನ ರದ್ದುಗೊಳಿಸಲಾಗಿದೆ.

 ಬೆಂಗಳೂರು :  ನೈಋತ್ಯ ರೈಲ್ವೆ, ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು - ಹುಬ್ಬಳ್ಳಿ, ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ಎರಡು ರೈಲುಗಳನ್ನು ಎರಡು ದಿನ ರದ್ದುಗೊಳಿಸಲಾಗಿದೆ. ಏ.6ರಂದು ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲು (07339) ಹಾಗೂ ಏ.7 ಕೆಎಸ್‌ಆರ್ ಬೆಂಗಳೂರು - ಹುಬ್ಬಳ್ಳಿ ನಡುವೆ ಸಂಚರಿಸುವ ವಿಶೇಷ ರೈಲನ್ನು (07340) ರದ್ದು ಮಾಡಲಾಗಿದೆ.ಏ.7 ಕೆಎಸ್‌ಆರ್ ಬೆಂಗಳೂರು - ಮೈಸೂರು ಸಂಚರಿಸುವ ಮೆಮು ವಿಶೇಷ ರೈಲು (06255) ಹಾಗೂ ಏ.8ರಂದು ಮೈಸೂರು - ಬೆಂಗಳೂರು ( 06560) ರೈಲನ್ನು ರದ್ದು ಪಡಿಸಲಾಗಿದೆ.

ತಾತ್ಕಾಲಿಕ ನಿಲುಗಡೆ:ಜೋಲಾರಪೆಟೆ-ಕೆ.ಎಸ್.ಆರ್‌. ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ಮೆಮು (16519/16520) ರೈಲುಗಳಿಗೆ ಮೇ 30 ರವರೆಗೆ ಅಂದರೆ ಎರಡು ತಿಂಗಳ ಕಾಲ ಹೂಡಿ ಹಾಲ್ಟ್ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲಾಗುತ್ತಿದೆ.

ಸೇವೆ ವಿಸ್ತರಣೆ:ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ಸರ್‌ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ಸೂಪರ್‌ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ (08543/08544) ರೈಲುಗಳ ಸೇವೆಯನ್ನು ಈಗಿರುವ ಸಮಯ ಮತ್ತು ನಿಲುಗಡೆಯೊಂದಿಗೆ ವಿಸ್ತರಿಸಲು ಪೂರ್ವ ಕರಾವಳಿ ರೈಲ್ವೆ ವಲಯವು ಸೂಚಿಸಿದೆ.

ವಿಶಾಖಪಟ್ಟಣಂ ನಿಲ್ದಾಣದಿಂದ ಪ್ರತಿ ಭಾನುವಾರ ಹೊರಡುತ್ತಿದ್ದ ರೈಲು (08543) ವಿಶಾಖಪಟ್ಟಣಂ- ಎಸ್‌ಎಂವಿಟಿ ಬೆಂಗಳೂರು ಸೂಪರ್‌ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಏ. 4ರಿಂದ ಜೂನ್ 30 ರವರೆಗೆ ಮುಂದುವರಿಸಲಾಗಿದೆ. ಈ ಮೊದಲು ಮಾರ್ಚ್ 31ರವರೆಗೆ ಓಡಿಸಲು ಸೂಚಿಸಲಾಗಿತ್ತು.ಬೆಂಗಳೂರಿನ ಸರ್‌ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಪ್ರತಿ ಸೋಮವಾರ ಹೊರಡುವ (08544) ಸರ್‌ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ವಿಶಾಖಪಟ್ಟಣಂ ಸೂಪರ್‌ಫಾಸ್ಟ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಏ. 7ರಿಂದ ಜು. 1ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಏಪ್ರಿಲ್ 1ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ