ಬೋನಿಗೆ ಬಿದ್ದ ೨ ವರ್ಷದ ಚಿರತೆ

KannadaprabhaNewsNetwork |  
Published : Jan 17, 2026, 02:30 AM IST
ಅರಣ್ಯ ಇಲಾಖೆ ಬೋನಿಗೆ ಬಿದ್ದ ೨ ವರ್ಷದ ಚಿರತೆ ಮರಿ | Kannada Prabha

ಸಾರಾಂಶ

ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಎರಡು ವರ್ಷದ ಚಿರತೆ ಸೆರೆಯಾಗಿದೆ

ಕೊರಟಗೆರೆ: ಕಳೆದ ಕೆಲವು ದಿನಗಳಿಂದ ಕಾವಲುಬೀಳು ಗ್ರಾಮದ ನಿವಾಸಿಗಳ ನಿದ್ದೆ ಕೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಎರಡು ವರ್ಷದ ಚಿರತೆ ಸೆರೆಯಾಗಿದೆ. ಪಟ್ಟಣದ ೪ನೇ ವಾರ್ಡ್ ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕು ನಾಯಿ ಮೇಲೆ ಮಂಗಳವಾರ ದಾಳಿ ನಡೆಸಿ ಜನರಲ್ಲಿ ಆತಂಕ ಉಂಟು ಮಾಡಿತ್ತು, ಸ್ಥಳೀಯ ರೈತರು ಭಯ ಭೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಸ್ಥಳದಲ್ಲಿ ಬೋನ್ ಇಟ್ಟಿದ್ದರು. ಆಹಾರಕ್ಕಾಗಿ ಬಂದ ಚಿರತೆ ಬೋನಿಗೆ ತಡರಾತ್ರಿ ಬಿದ್ದಿದೆ. ವಿಷಯ ತಿಳಿದ ಕೂಡಲೇ ಡಿಆರ್‌ಎಫ್‌ಒ ದಿಲೀಪ್ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೋನಿಗೆ ಬಿದ್ದ ಚಿರತೆಯನ್ನು ಬೇರೆಡೆ ಸಾಗಿಸುವ ವ್ಯವಸ್ಥೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ