ಕನ್ನಡಪ್ರಭ ವಾರ್ತೆ ಬೆಂಗಳೂರು
108 ಆ್ಯಂಬುಲೆನ್ಸ್ ಸಿಬ್ಬಂದಿ ಮತ್ತು ವೈದ್ಯರು ಬೀದಿಗಿಳಿದು ಹೋರಾಡುವ ಪರಿಸ್ಥಿತಿಯನ್ನು ಸರ್ಕಾರ ತಂದಿಟ್ಟಿದೆ. ಕಾಂಗ್ರೆಸ್ನವರು ಸಾವಿರ ದಿನಗಳ ಸಾಧನಾ ಸಮಾವೇಶ ಮಾಡುತ್ತಾರೆ. ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ ಎಂದು ಟೀಕಿಸಿದರು. ಇವರ ಬೇಜವಾಬ್ದಾರಿಯಿಂದ ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ. ಔಷಧ ಕೊರತೆ ಕಾಡುತ್ತಿದೆ ಎಂದು ಹರಿಹಾಯ್ದರು.ಸರ್ಕಾರದ ಬೇಜವಾಬ್ದಾರಿ ವರ್ತನೆಯಿಂದ ರಾಜ್ಯದ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಕಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಸಹಿಸಲಾಗದೇ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿದ್ದ ಜನೌಷಧ ಕೇಂದ್ರಗಳನ್ನು ಮುಚ್ಚಿ ಹಾಕುವ ಷಡ್ಯಂತ್ರ ಮಾಡಿದ್ದೇ ಇವರ ಘನಂದಾರಿ ಕೆಲಸ. ಬಡವರೇ ಅತಿ ಹೆಚ್ಚು ಸಂಖ್ಯೆಯಲ್ಲಿ ಹೋಗುವ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಸಿಗದೇ ಕಳೆದೆರಡು ತಿಂಗಳಿನಿಂದ ಬಡವರು ಪರದಾಡುತ್ತಿದ್ದಾರೆ. ಖಾಸಗಿ ಫಾರ್ಮಸಿಯಿಂದ ಔಷಧ ಖರೀದಿಸಲು ಸರ್ಕಾರಿ ವೈದ್ಯರೇ ತಿಳಿಸುವಂತಾಗಿದೆ ಎಂದು ಆಕ್ಷೇಪಿಸಿದರು.ಸಿಟಿ ಸ್ಕ್ಯಾನ್, ಎಂಆರ್ಐ ಸೇವೆ ನೀಡುವ ಸಂಸ್ಥೆಗೆ 143 ಕೋಟಿ ರು.ಗಳನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದರಿಂದ ಬಡವರು ಸಿಟಿ ಸ್ಕ್ಯಾನ್, ಎಂಆರ್ಐ ಸೇವೆ ಇಲ್ಲದೇ ಪರದಾಡಬೇಕಾಗಿದೆ. ಗರ್ಭಿಣಿಯರಿಗೂ ಅನಾನುಕೂಲ ಆಗುತ್ತಿದೆ. ವೈದ್ಯರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದರೆ ಈ ರಾಜ್ಯ ಸರ್ಕಾರಕ್ಕೆ ಮಾನ- ಮರ್ಯಾದೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದರು.ರಾಜ್ಯ ಸರ್ಕಾರಕ್ಕೆ ಸುಳ್ಳೇ ಮನೆ ದೇವರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಳ್ಳಾಟ-ಕಳ್ಳಾಟ ನಿಲ್ಲಿಸಿ ನಾಡಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ಮಾಡಲು ಸಾಧ್ಯವಿಲ್ಲ. ಈ ಸರ್ಕಾರದ ಮನೆ ದೇವರೇ ಸುಳ್ಳು. ಏನೇ ಸಮಸ್ಯೆಗಳು ಎದುರಾದರೂ ಹಿಂದಿನ ಬಿಜೆಪಿ ಸರ್ಕಾರವನ್ನು ದೂರುತ್ತಾರೆ. ಕಳೆದ ಮೂರು ವರ್ಷಗಳಿಂದ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಷಡ್ಯಂತ್ರ-ಕುತಂತ್ರ ಮಾಡುತ್ತಿದೆ ಎಂದು ಕಿಡಿಕಾರಿದರು.ಸಿಎಂ ಮತ್ತು ಡಿಸಿಎಂ ಸಾವಿರ ದಿನಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಇದು ನುಡಿದಂತೆ ನಡೆಯುವ, ಬಡವರ ಪರ ಸರ್ಕಾರವಲ್ಲ. ದಲ್ಲಾಳಿಗಳಿಗೋಸ್ಕರ ಇರುವ ಸರ್ಕಾರ. ದಲ್ಲಾಳಿಗಳ ಸಾಕುವ ಸರ್ಕಾರ. ಈ ಸರ್ಕಾರಕ್ಕೆ ಮಾನ-ಮರ್ಯಾದೆ ಇಲ್ಲ ಎಂದು ಹರಿಹಾಯ್ದರು.-ಕೋಟ್-ಖಾಲಿ ಹುದ್ದೆಗಳ ಭರ್ತಿಮಾಡದಿದ್ರೆ ಹೋರಾಟಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವಿಕ ಸತ್ಯವನ್ನು ಬಿಚ್ಚಿಟ್ಟು ರಾಜ್ಯದ ಜನರ ಕ್ಷಮೆ ಕೇಳಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಖಾಲಿ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ, ಬಿಜೆಪಿ ಹೋರಾಟಕ್ಕೆ ಇಳಿಯಲಿದೆ.- ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ