ಸಮುದಾಯ ಭವನ ನಿರ್ಮಾಣಕ್ಕೆ ₹೨೦ ಲಕ್ಷ ಅನುದಾನ: ಶಾಸಕ ಜೆ.ಟಿ. ಪಾಟೀಲ

KannadaprabhaNewsNetwork |  
Published : Aug 08, 2025, 02:00 AM IST
ನಿಜಶರಣ ಹಡಪದ ಅಪ್ಪಣ್ಣ ಇವರ ೮೯೧ನೇ ಜಯಂತಿ ಉತ್ಸವ  | Kannada Prabha

ಸಾರಾಂಶ

ಹಡಪದ ಅಪ್ಪಣ್ಣ ಸಮಾಜ ಬಾಂಧವರು ಹಲವು ದಿನಗಳಿಂದ ಸಮಾಜ ಕಾರ್ಯಚಟುವಟಿಕೆಗಳಿಗೆ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶೀಘ್ರ ೨೦ ಲಕ್ಷ ಅನುದಾನ ನೀಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಹಡಪದ ಅಪ್ಪಣ್ಣ ಸಮಾಜ ಬಾಂಧವರು ಹಲವು ದಿನಗಳಿಂದ ಸಮಾಜ ಕಾರ್ಯಚಟುವಟಿಕೆಗಳಿಗೆ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶೀಘ್ರ ₹೨೦ ಲಕ್ಷ ಅನುದಾನ ನೀಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.

ಇಲ್ಲಿನ ಬಸವೇಶ್ವರ ದೇವಾಲಯದ ಸಭಾಭವನದಲ್ಲಿ ಗುರುವಾರ ನಿಜಶರಣ ಹಡಪದ ಅಪ್ಪಣ್ಣ ಇವರ ೮೯೧ನೇ ಜಯಂತಿ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹಡಪದ ಸಮಾಜದವರು ಶ್ರಮಜೀವಿಗಳಾಗಿದ್ದು, ನಿಮ್ಮ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ. ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗಬೇಡಿ, ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಜನಪರ ಕೆಲಸ ಮಾಡಿದೆ ಈ ಬಾರಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ರಾಜ್ಯದ ಎಲ್ಲ ವರ್ಗದ ಜನರಿಗೂ ಅನುಕೂಲವಾಗುವಂತೆ ಮಾಡಲಾಗಿದೆ. ಸರ್ಕಾರದಿಂದ ಮಂಜೂರಾದ ಯೋಜನೆಗಳು ಸದುಪಯೋಗ ಮಾಡಿಕೊಂಡು ಸದೃಢ ಸಮಾಜ ನಿರ್ಮಿಸಲು ಮುಂದಾಗಿ ಎಂದು ಸಲಹೆ ನೀಡಿದರು.

ವಕೀಲ ರಾಜು ಜಡ್ರಾಮಕುಂಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಗಂಡಗಿಯ ಹಡಪದ ಅಪ್ಪಣ್ಣ ಮಹಾಸಂಸ್ಥಾನ ಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾವಿತ್ರಿ ಶರಣಮ್ಮನವರು, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅನವೀರಯ್ಯ ಪ್ಯಾಟಿಮಠ, ವಿನಯ ತಿಮ್ಮಾಪೂರ, ಪಪಂ ಅಧ್ಯಕ್ಷ ಮುತ್ತು ಬೋರ್ಜಿ, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣ ಪಾಟೀಲ, ಸಿಪಿಐ ಎಚ್.ಬಿ. ಸನಮನಿ, ಕಾಂಗ್ರೆಸ್ ತಾಲೂಕು ಅಧ್ಯಕ್ಷ ಹಣಮಂತ ಕಾಖಂಡಕಿ, ಬಿಜೆಪಿ ತಾಲೂಕಾಧ್ಯಕ್ಷ ಹೊಳಬಸು ಬಾಳಶೆಟ್ಟಿ, ಡಿಎಸ್ ಎಸ್ ಬೆಳಗಾವಿ ವಿಭಾಗೀಯ ಅಧ್ಯಕ್ಷ ಮಹಾದೇವ ಹಾದಿಮನಿ, ಪಪಂ ಸದಸ್ಯರಾದ ಸಂತೋಷ ನಿಂಬಾಳಕ, ಎಚ್.ಡಿ. ವೈದ್ಯ, ಮಲ್ಲಿಕಾರ್ಜುನ ಹಡಪದ, ರವಿ ಕೋಲಾರ, ನಾಗರಾಜ್ ಹಡಪದ ಇದ್ದರು.

ಮುನ್ನಾ ತಹಸೀಲ್ದಾರ್ ಕಚೇರಿಯಲ್ಲಿನ ಗಣಪತಿ ದೇವಸ್ಥಾನದಿಂದ ಗಾಂಧಿ ವೃತ್ತದ ಮುಖಾಂತರ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಶಿವಾಜಿ ವೃತ್ತದವರಿಗೆ ಹಡಪದ ಅಪ್ಪಣ್ಣ ಅವರ ಭಾವಚಿತ್ರದೊಂದಿಗೆ ನೂರಾರು ಮಹಿಳೆಯರ ಕುಂಭಮೇಳ, ಸಕಲ ವಾದ್ಯ ವೈಭವಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಸಮಾರಂಭದಲ್ಲಿ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಪ್ರಕಾಶ ಹಡಪದ ವಿಶೇಷ ಉಪನ್ಯಾಸ ನೀಡಿದರು.

ಸ್ವಾಭಿಮಾನಿ ನಿರಂತರ ದುಡಿಮೆ ಕಾಯಕ ಮಾಡುವ ಸಮಾಜ ಹಡಪದ ಅಪ್ಪಣ್ಣ ಸಮಾಜ, ನಿತ್ಯ ಅವರು ಕ್ಷೌರಿಕ ವೃತ್ತಿ ಮಾಡಿ ಜೀವನ ಸಾಗಿಸುತ್ತಿದ್ದವರು. ಈ ಸಮಾಜದ ಬಹುತೇಕ ಕುಟುಂಬಗಳಲ್ಲಿ ಜಮೀನು ಇಲ್ಲದೆ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯ ನೀಡಲಾಗುವುದು ಜೊತೆಗೆ ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮದ ಕುರಿತಾಗಿ ಚರ್ಚಿಸಿ ಹಣಕಾಸು ಮಂಜೂರು ಮಾಡಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.

-ಜೆ.ಟಿ. ಪಾಟೀಲ ಶಾಸಕರು ಬೀಳಗಿ

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ