ಕನ್ನಡಪ್ರಭ ವಾರ್ತೆ ಬೆಂಗಳೂರು
ಕ್ಲಿಫರ್ಡ್ ರಾಯನ್ ಸೇರಿ ಇತರರು ನೀಡಿದ ದೂರಿನನ್ವಯ ಜೋನ್ಸ್ ಪ್ರಾಪರ್ಟಿ ಮ್ಯಾನೇಜ್ಮೆಂಟ್ ಸಂಸ್ಥೆಯ ಎಂ.ಡಿ ಸ್ಟೀಫನ್ ಅರ್ಥರ್ ಜೋನ್ಸ್ ಹಾಗೂ ಇತರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಣ್ಣೂರು ಮುಖ್ಯರಸ್ತೆಯ ನಿವಾಸಿ ಕ್ಲಿಫರ್ಡ್ ರಾಯನ್ ಎಂಬುವರು 2025ರ ಜೂನ್ನಲ್ಲಿ ಬಾಡಿಗೆ ಮನೆ ಹುಡುಕುತ್ತಿದ್ದಾಗ ಜೋನ್ಸ್ ಪ್ರಾಪರ್ಟಿ ಮ್ಯಾನೇಜ್ಮೆಂಟ್ ಎಂಬ ಸಂಸ್ಥೆ ಸಂಪರ್ಕಕ್ಕೆ ಬಂದು ನಿಮಗೆ ಮನೆ ಕೊಡಿಸುವುದಾಗಿ ಹೇಳಿದ್ದರು. ಲೀಸ್ ಹಣ ನಮಗೆ ಕೊಡಿ ನಿಮ್ಮ ಮನೆಯ ಬಾಡಿಗೆ ಹಣ ನಾವು ಕಟ್ಟುತ್ತೇವೆ ಎಂದು ನಂಬಿಸಿದ್ದಾರೆ.ನಂತರ ಸಂಸ್ಥೆಯ ಉದ್ಯೋಗಿ ಅಬ್ದುಲ್ ಮತ್ತು ಮ್ಯಾನೇಜರ್ ಸವಿತಾ ಎಂಬುವರು ಕಂಪನಿಯ ನಿಯಮಗಳನ್ನು ವಿವರಿಸಿದ್ದಾರೆ. ನಂತರ ರಾಯನ್ ಅವರು ವಿವಿಧ ಹಂತಗಳಲ್ಲಿ ಆನ್ಲೈನ್ ಮೂಲಕ 21 ಲಕ್ಷ ಹಣವನ್ನು ಜೋನ್ಸ್ ಪ್ರಾಪರ್ಟಿ ಮ್ಯಾನೇಜ್ಮೆಂಟ್ನ ಬ್ಯಾಂಕ್ ಖಾತೆಗೆ ಹಣ ಪಾವತಿಸಿದ್ದಾರೆ.ಆ.12 ರಂದು ಒಪ್ಪಂದ ಮಾಡಿಕೊಂಡು ಮನೆಯಲ್ಲಿ ವಾಸವಿದ್ದರು. ಮನೆಯ ಅಸಲಿ ಮಾಲೀಕರಾದ ರಾಜು ಬೆನೆಡಿಕ್ಟ್ ಅವರಿಗೆ ಬಾಡಿಗೆ ಹಣ ನೀಡುವುದಾಗಿ ಈ ಸಂಸ್ಥೆ ಒಪ್ಪಂದ ಮಾಡಿಕೊಂಡಿತ್ತು. 2026 ಮೇ 1ರಂದು ಮಾಲೀಕರು ಕರೆ ಮಾಡಿ 6 ತಿಂಗಳಿನಿಂದ ಬಾಡಿಗೆ ನೀಡಿರುವುದಿಲ್ಲ, ತಕ್ಷಣ ಮನೆ ಖಾಲಿ ಮಾಡುವಂತೆ ಕ್ಷಿಫರ್ಡ್ ರಾಯನ್ ಅವರಿಗೆ ತಿಳಿಸಿದ್ದಾರೆ.
ಪ್ರಕರಣ ಸಿಐಡಿಗೆ ವರ್ಗಾವಣೆ!
ಭೋಗ್ಯಕ್ಕೆ (ಲೀಸ್) ಮನೆ ಹುಡುಕುತ್ತಿರುವವರನ್ನು ಜೋನ್ಸ್ ಪ್ರಾಪರ್ಟಿ ಮ್ಯಾನೇಜ್ಮೆಂಟ್ ಕಂಪನಿಯು ಟಾರ್ಗೆಟ್ ಮಾಡುತ್ತಿತ್ತು. ನಿಮ್ಮ ಲೀಸ್ ಹಣ ನಮಗೆ ಕೊಡಿ, ಪ್ರತಿ ತಿಂಗಳು ನಿಮ್ಮ ಮನೆಯ ಬಾಡಿಗೆ ನಾವು ಕಟ್ಟುತ್ತೇವೆ ಎಂದು ಬಾಡಿಗೆದಾರರನ್ನು ನಂಬಿಸಿ ಅಗ್ರಿಮೆಂಟ್ ಕೂಡ ಮಾಡಿ ಕೊಡುತ್ತಿದ್ದರು. ಆರಂಭದಲ್ಲಿ ಕೆಲ ತಿಂಗಳು ಬಾಡಿಗೆ ನೀಡುತ್ತಿದ್ದ ಕಂಪನಿಯು ನಂತರ ಬಾಡಿಗೆ ನೀಡದೆ ವಂಚಿಸಿದೆ. ವಂಚನೆ ಪ್ರಕರಣದಲ್ಲಿ ಈ ಹಿಂದೆ ಸಿಸಿಬಿ ಸ್ಟೀಫನ್ನನ್ನು ಬಂಧನ ಮಾಡಿತ್ತು ಎಂದು ತಿಳಿದು ಬಂದಿದೆ.