ಶಾಸಕ ಜಿಎಸ್ಪಿ ಹುಟ್ಟುಹಬ್ಬಕ್ಕೆ 2 ಸಾವಿರ ಸಸಿ ನೆಡುವ ಕಾರ್ಯಕ್ರಮ

KannadaprabhaNewsNetwork |  
Published : Apr 08, 2025, 12:35 AM IST
7 ರೋಣ 1. ಶಾಸಕ ಜಿ.ಎಸ್‌.ಪಾಟೀಲ ಅವರ 78 ನೇ ಹುಟ್ಟು ಹಬ್ಬ ಆಚರಣೆ ಅಂಗವಾಗಿ ರೋಣ ಪಟ್ಟಣದ ಕೆಪಿಸಿಸಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಜರುಗಿತು. | Kannada Prabha

ಸಾರಾಂಶ

ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಹುಟ್ಟುಹಬ್ಬ ಅಂಗವಾಗಿ ಏ.10 ರಂದು ರೋಣ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ, ಕಾಲೇಜು ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ರೋಣ: ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಹುಟ್ಟುಹಬ್ಬ ಅಂಗವಾಗಿ ಏ.10 ರಂದು ರೋಣ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ, ಕಾಲೇಜು ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಸೋಮವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ರೋಣ ಮತಕ್ಷೇತ್ರ ಯುವ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಮುತ್ತಣ್ಣ ನವಲಗುಂದ, ಶಾಸಕ ಜಿ.ಎಸ್. ಪಾಟೀಲರ 78ನೇ ವರ್ಷದ ಹುಟ್ಟು ಹಬ್ಬದ ನಿಮಿತ್ತ ರೋಣ ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮ ಪಂಚಾಯತಿ, ತಹಸೀಲ್ದಾರ್‌ ಕಚೇರಿ ಸೇರಿದಂತೆ ಪ್ರತಿಯೊಂದು ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳ ಆವರಣದಲ್ಲಿ 2000ಕ್ಕೂ ಹೆಚ್ಚು ಸಸಿ ನೆಡಲಾಗುವುದು, ಆ ಎಲ್ಲಾ ಸಸಿಗಳ ಪಾಲನೆ, ಪೋಷಣೆ ಜವಾಬ್ದಾರಿಯನ್ನು ಯುವ ಕಾಂಗ್ರೆಸ್ ಸಮಿತಿ ಸದಸ್ಯರೇ ವಹಿಸಿಕೊಳ್ಳಲಿದ್ದಾರೆ ಎಂದು ಘೋಷಿಸಿದರು.

ಸೇವಾ ಕಾರ್ಯಕ್ರಮಗಳು: ಅಂದು ರೋಣ, ನರೇಗಲ್ಲ, ಗಜೇಂದ್ರಗಡ ಸೇರಿದಂತೆ ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ರೋಗಿಗಳಿಗೆ ಹಾಲು, ಹಣ್ಣು, ಹಂಪಲ ವಿತರಣೆ ಮಾಡಲಾಗುವುದು. ರೋಣ ಪಟ್ಟಣದಲ್ಲಿರುವ ಬಿ.ಡಿ. ತಟ್ಟಿ ವಿಶೇಷ ಚೇತನ ಮಕ್ಕಳ ಪುನಶ್ಚೇತನ ತರಬೇತಿ ಶಾಲಾ ಮಕ್ಕಳಿಗೆ ಹಣ್ಣು, ಹಂಪಲ ಹಾಗೂ ಶಾಲೆಗೆ ಅಗತ್ಯವಿರುವ ಪರಿಕರಗಳನ್ನು ವಿತರಣೆ ಮಾಡಲಾಗುವುದು. ಸೂಡಿ, ಜಕ್ಕಲಿ, ನಿಡಗುಂದಿ ಗ್ರಾಮಗಳು ಹಾಗೂ ರೋಣ ಪಟ್ಟಣದಲ್ಲಿ ಜಿ.ಎಸ್.ಪಾಟೀಲ ಅಭಿಮಾನಿಗಳ ಬಳಗದಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗುವುದು. ಗದಗ ನಗರದ ಸುರಭಿ ಅನಾಥಾಶ್ರಮದಲ್ಲಿ ಇರುವವರಿಗೆ ಒಂದು ದಿನದ ಐತಿಹಾಸಿಕ ತಾಣ, ಬಿಂಕದಕಟ್ಟಿ ಪ್ರಾಣಿಸಂಗ್ರಾಲಯ ಭೇಟಿ ಪ್ರವಾಸ ಹಮ್ಮಿಕೊಳ್ಳಲಾಗುವದು. ಇದರ ಜೊತೆಗೆ ಇನ್ನು ಹಲವಾರು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದು ಎಂದರು.

ಶಾಸಕ ಜಿ.ಎಸ್. ಪಾಟೀಲ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅಭಿಮಾನಿಗಳಿಗೆ ರೋಣ ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರೋಣ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೀರಣ್ಣ ಶೆಟ್ಟರ್, ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಶರಣಪ್ಪ ಬೇಟಗೇರಿ ಮಾತನಾಡಿದರು. ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಪ್ರಭು ಮೇಟಿ, ಅಕ್ಷಯ ಪಾಟೀಲ, ಮಿಥುನ ಪಾಟೀಲ, ಬಸವರಾಜ ನವಲಗುಂದ, ಮುತ್ತಣ್ಣ ಸಂಗಳದ, ಯೂಸೂಫ ಇಟಗಿ, ವ್ಹಿ.ಆರ್. ಗುಡಿಸಾಗರ, ವೆಂಕಣ್ಣ ಬಂಗಾರಿ, ವ್ಹಿ.ಬಿ. ಸೋಮನಕಟ್ಟಿಮಠ, ಪರಶುರಾಮ‌ ಅಳಗವಾಡಿ, ಗೀತಾ ಮಾಡಲಗೇರಿ, ರಮೇಶ ಪಲ್ಲೇದ, ಮಂಜುಳಾ ಹುಲ್ಲಣ್ಣವರ, ದುರ್ಗಪ್ಪ ಹಿರೇಮನಿ, ರಂಗವ್ವ ಭಜಂತ್ರಿ, ಮಹೇಶ ಕಳಸಣ್ಣವರ, ಗೋಪಿ ರಾಯನಗೌಡ್ರ, ಯಲ್ಲಪ್ಪ ಕಿರೇಸೂರ ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ