ಕನ್ನಡಪ್ರಭ ವಾರ್ತೆ ಕಮಲನಗರ
ಅವರು ಕಮಲನಗರ ಪಟ್ಟಣದ ಮಹಾತ್ಮಾ ಗಾಂಧಿ ಶಾಲೆಯ ಮೈದಾನದಲ್ಲಿ ಜಿಪಂ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಕ್ರೀಡಾ ಮನೋಭಾವ ಕಮ್ಮಿಯಾಗುತ್ತಿದೆ. ಹೀಗಾಗಿ ಮಕ್ಕಳಲ್ಲಿನ ಕ್ರೀಯಾಶೀಲತೆ ಕುಂದಿ ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಇದಕ್ಕೆ ಅತೀಯಾದ ಮೊಬೈಲ್ ಬಳಕೆ ಕಾರಣವಾಗುತ್ತಿದೆ ಎಂದು ಶಾಸಕ ಚವ್ಹಾಣ ಕಳವಳ ವ್ಯಕ್ತ ಪಡಿಸಿದರು.
ನಮ್ಮ ತಾಲೂಕಿನಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಅವರಿಗೆ ಸರಿಯಾದ ವೇದಿಕೆಗಳು ಸಿಗಬೇಕಾಗಿದೆ, ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿವೆ. ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಎಂದು ಸಲಹೆ ನೀಡಿದರು.ವಲಯ ಮಟ್ಟದಲ್ಲಿ ತಮ್ಮ ಪ್ರತಿಭೆ ತೋರಿದವರು ತಾಲೂಕು ಮಟ್ಟಕ್ಕೆ ಆಯ್ಕೆಯಾಗುತ್ತಿರಿ, ಇಲ್ಲಿ ನಿಮ್ಮ ಪ್ರತಿಭೆ ಪ್ರದರ್ಶನ ಮಾಡಿ ಜಿಲ್ಲಾ, ರಾಜ್ಯ ಮಟ್ಟದ ವರೆಗೆ ಹೋಗಬೇಕು, ಪ್ರಶಸ್ತಿಗಾಗಿ ಸೆಣಸುವುದರ ಜೊತೆಗೆ ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಸಲಹೆ ನೀಡಿದರು.
ಕಮಲನಗರ ಹೋಬಳಿಯಲ್ಲಿ 18 ತಂಡಗಳಿದ್ದು, ಖೋಖೋ, ಕಬಡ್ಡಿ, ಲಾಂಗ ಜಂಪ್, ಹೈ ಜಂಪ್, ರನ್ನಿಂಗ್, ಮುಂತಾದ ಆಟಗಳು ಸ್ಪರ್ಧೆಗಳ ಏರ್ಪಡಿಸಲಾಗಿತ್ತು.