21 ಜನರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರು

KannadaprabhaNewsNetwork |  
Published : Jul 24, 2024, 01:17 AM IST
ಕಮಲಾಪುರದಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರು ಅಹವಾಲು ಸ್ವೀಕರಿಸಿದರು. | Kannada Prabha

ಸಾರಾಂಶ

ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಸುಮಾರು 120 ಅರ್ಜಿಗಳ ಪೈಕಿ ಪಿಂಚಣಿಗೆ ಸಂಬಂಧಿಸಿದ 21 ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಇದರಲ್ಲಿ ವಿಧವಾ ವೇತನ, ವಿಶೇಷ ಚೇತನ ವೇತನ, ಸಂಧ್ಯಾ ಸುರಕ್ಷಾ ವೇತನ, ಹಿರಿಯ ನಾಗರಿಕರ ವೇತನ ಪಿಂಚಣಿ ಸೇರಿವೆ. ಇನ್ನುಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಮಲಾಪುರ ಪಟ್ಟಣದ ಕೋಹಿನೂರ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದಲ್ಲದೆ ಸ್ಥಳದಲ್ಲಿಯೇ 21 ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಆದೇಶ ಪತ್ರ ವಿತರಣೆ ಮಾಡಿದರು.

ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಸುಮಾರು 120 ಅರ್ಜಿಗಳ ಪೈಕಿ ಪಿಂಚಣಿಗೆ ಸಂಬಂಧಿಸಿದ 21 ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಇದರಲ್ಲಿ ವಿಧವಾ ವೇತನ, ವಿಶೇಷ ಚೇತನ ವೇತನ, ಸಂಧ್ಯಾ ಸುರಕ್ಷಾ ವೇತನ, ಹಿರಿಯ ನಾಗರಿಕರ ವೇತನ ಪಿಂಚಣಿ ಸೇರಿವೆ. ಇನ್ನುಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಯಿತು.

ಇದೇ‌ ಸಂದರ್ಭದಲ್ಲಿ ಪ್ರಧಾನಮಂತ್ರಿ-ಕರ್ನಾಟಕ ಫಸಲ್‌ ಬಿಮಾ ಬೆಳೆ ವಿಮೆ ಯೋಜನೆಯಡಿ ನೊಂದಣಿಗೆ ರೈತರಿಗೆ ಕರೆ ನೀಡಿದ ಜಿಲ್ಲಾಧಿಕಾರಿಗಳು ಬೆಳೆ ವಿಮೆ ಕುರಿತು ಪೋಸ್ಟರ್ ಬಿಡುಗಡೆಗೊಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ಇದ್ದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಸಹಾಯಕ ಆಯುಕ್ತೆ ರೂಪಿಂದರ್ ಸಿಂಗ್ ಕೌರ್, ತಹಸೀಲ್ದಾರ ಮೊಹಮ್ಮದ್ ಮೋಹಸಿನ್, ಎ.ಸಿ.ಪಿ ಬಿಂದುರಾಣಿ, ಗ್ರೇಡ್-2 ತಹಸೀಲ್ದಾರ್‌ ಗಂಗಾಧರ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಇದ್ದರು.

ಕಾಳಗಿಯಲ್ಲಿಯೂ ಜನಸ್ಪಂದನಾ ಸಭೆ: ಮಂಗಳವಾರ ಕಾಳಗಿ ಪಟ್ಟಣದ ಕಾಳೇಶ್ವರ ದೇವಸ್ಥಾನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಭಾಗಿಯಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾದರು. ಶಾಂತಚಿತ್ತದಿಂದ ಪ್ರತಿಯೊಬ್ಬರ ಸಮಸ್ಯೆ ಆಲಿಸಿ ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೆ ಮುಕ್ತಿ ನೀಡಿದರು. ಒಟ್ಟಾರೆ 83 ಅರ್ಜಿ‌ ಸಲ್ಲಿಕೆಯಾದವು. ಇದೇ ಸಂದರ್ಭದಲ್ಲಿ ಎ.ಬಿ.ಆರ್.ಕೆ. ಆರೋಗ್ಯ ಕಾರ್ಡ್, ಪಿಂಚಣಿ ಮಂಜೂರಾತಿ ಆದೇಶ, ಪಡಿತರ ಚೀಟಿ, ಪೌರ ಕಾರ್ಮಿಕರಿಗೆ ರೇನ್ ಕೋಟ್, ಸುಕನ್ಯಾ ಸಮೃದ್ಧಿ ಪಾಸ್ ಬುಕ್ ವಿತರಣೆ ಮಾಡಲಾಯಿತು. ತಹಸೀಲ್ದಾರ್‌ ಘಮಾವತಿ ರಾಠೋಡ, ತಾಲೂಕು ಪಂಚಾಯ್ತಿ ಇ.ಓ ವಿಲಾಸರಾಜ ಸೇರಿದಂತೆ ಅನೇಕ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ