ಕನ್ನಡಪ್ರಭ ವಾರ್ತೆ ಮಂಡ್ಯ
೨೦೨೨-೨೩ನೇ ಸಾಲಿನ ಹದಿನೈದನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಅಧ್ಯಕ್ಷ ಮತ್ತು ಪಿಡಿಒ ಅವರು ಜೂ.೨೯, ಜು.೭, ಜು.೧೫ ಹಾಗೂ ನವೆಂಬರ್ ೨೦ರಂದು ೨೨ ಲಕ್ಷ ರು.ಗೂ ಅಧಿಕ ಮೊತ್ತವನ್ನು ಡ್ರಾ ಮಾಡಿಕೊಂಡು ದುರುಪಯೋಗ ಪಡಿಸಿಕೊಂಡಿರುವ ಕುರಿತು ಮಂಡ್ಯ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಇಒ ಅವರಿಗೆ ಕಳೆದ ವರ್ಷ ಜು.೪ರಂದು ದೂರು ನೀಡಿದ್ದರು.
ಹಳುವಾಡಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಮತ್ತು ಪಿಡಿಒ ಹದಿನೈದನೇ ಹಣಕಾಸು ಯೋಜನೆಯ ಅನುದಾನದಲ್ಲಿ ಯಾವುದೇ ಸಾಮಗ್ರಿ, ನೀರು ಸರಬರಾಜು ಸಾಮಗ್ರಿಗಳು, ಕಂಪ್ಯೂಟರ್ ಸಾಮಗ್ರಿ ಖರೀದಿಸದಿದ್ದರೂ ಹಣ ಡ್ರಾ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ. ಸಾಮಗ್ರಿಗಳ ಖರೀದಿಗೆ ಸಂಬಂಧಿಸಿದಂತೆ ಸಾಮಾನ್ಯ ಸಭೆಯ ಗಮನಕ್ಕೆ ತರದೆ ಕ್ರಿಯಾ ಯೋಜನೆ, ಅನುಮೋದನೆ ಪಡೆಯದೆ ಅಕ್ರಮ ನಡೆಸಿದ್ದರೆಂದು ದೂರಲಾಗಿತ್ತು.ಈ ಸಂಬಂಧ ೨೦೨೪ರ ಮೇ ೧೬ರಂದು ಜಿಪಂ ಸಿಇಒ ಅವರಿಗೆ ದೂರು ನೀಡಿ ಸೂಕ್ತ ತನಿಖೆ ಹಾಗೂ ಪರಿಶೀಲನೆ ನಡೆಸಿ ಪಿಡಿಒ ನರಸಿಂಹಮೂರ್ತಿ, ಅಂದಿನ ಅಧ್ಯಕ್ಷರಾಗಿದ್ದ ಎಚ್.ಎಸ್.ಪ್ರೇಮಾ ಮತ್ತು ಸಿ.ಆರ್.ಕೃಷ್ಣ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಅಲ್ಲದೇ, ಪ್ರತಿಯನ್ನು ರಾಜ್ಯ ಲೋಕಾಯುಕ್ತಕ್ಕೂ ಸಲ್ಲಿಸಲಾಗಿತ್ತು. ಆದರೆ, ಈವರೆಗೂ ಕ್ರಮ ವಹಿಸಿದ ಬಗ್ಗೆ ವರದಿಯಾಗಿರಲಿಲ್ಲ.
ಆದ್ದರಿಂದ ಕಾಮಗಾರಿಗಳ ಕಡತಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಸ್ಥಳ ಪರಿಶೀಲನೆ ನಡೆಸಿ ನಂತರ ಕಂಡು ಬಂದ ಅಂಶಗಳಿಗೆ ಅನುಗುಣವಾಗಿ ಕಾಮಗಾರಿಗಳಿಗೆ ಸಂಬಂಧಪಟ್ಟ ಮೊತ್ತವನ್ನು ವಸೂಲಾತಿ ಮಾಡುವ ಅಥವಾ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅನುಷ್ಠಾನ ಇಲಾಖೆಯು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಶಿಫಾರಸು ಮಾಡಿರುವುದು ಬೆಳಕಿಗೆ ಬಂದಿದೆ.