ಕನ್ನಡಪ್ರಭ ವಾರ್ತೆ ಮೂಡಲಗಿ
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕು ಘಟಕದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆ. 22ರಂದು ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮೂಡಲಗಿ ತಾಲೂಕು ಘಟಕದ ಅಧ್ಯಕ್ಷ ಶಿವಪ್ಪ ಭುಜನ್ನವರ ಹೇಳಿದರು.ಪಟ್ಟದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕು ಘಟಕದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಆಮಂತ್ರ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಸಂಘದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಚಿದಾನಂದ ಶೆಟ್ಟರ ಮಾತನಾಡಿ, ಅ.22ರಂದು ಬೆಳಗ್ಗೆ 9 ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಪಟ್ಟಣದ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರೇಯಬೋಧ ಸ್ವಾಮೀಜಿ,ಶ್ರೀಧರಬೋಧ ಸ್ವಾಮೀಜಿ, ಸುಣಧೋಳಿ ಜಡಿಸಿಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮೀಜಿ ವಹಿಸುವರು. ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಉದ್ಘಾಟಿಸುವರು, ಮುಖ್ಯ ಅಥಿತಿಗಳಾಗಿ ಬೆಳಗಾವಿ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಆಗಮಿಸಲಿದ್ದು, ಬಣಜಿಗ ಸಂಘದ ತಾಲೂಕು ಘಟಕದ ಅಧ್ಯಕ್ಷ ಶಿವಪ್ಪ ಭುಜನ್ನವರ ಅಧ್ಯಕ್ಷತೆ ವಹಿಸುವರು, ಧಾರವಾಡ ಸಾಹಿತಿ ಡಾ.ಸಂಗಮನಾಥ ಲೋಕಾಪುರ ಉಪನ್ಯಾಸ ನೀಡುವರು ಹಾಗೂ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ವಾಣಿ ಉಪಸ್ಥಿತರಿರುವರು. ಇದೇ ಸಮಾರಂಭದಲ್ಲಿ ಸಮಾಜ 70 ವರ್ಷ ಪುರೈಸಿದ ಹಿರಿಯ ಜೀವಿಗಳನ್ನು ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರಿಕ್ಷೆಯಲ್ಲಿ ಅಧಿಕ ಅಂಕಗಳಿಸಿದವರಿಗೆ ಹಾಗೂ ವಿಶೇಷ ಸಾಧನೆ ಗೈದವರನ್ನು ಸತ್ಕರಿಸಿ ಗೌರವಿಸಲಾಗುವುದು.ಪತ್ರಿಕಾಗೋಷ್ಠಿಯಲ್ಲಿ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಉಪಾಧ್ಯಕ್ಷ ಪ್ರಕಾಶ ಪುಠಾಣಿ, ಖಜಾಂಚಿ ಶಿವಾನಂದ ಗಾಡವಿ, ನಿರ್ದೇಶಕರಾದ ವಿರುಪಾಕ್ಷ ಗಾಡವಿ, ಸಂತೋಷ ಅಂಗಡಿ, ವಿಶ್ವನಾಥ ಶೀಲವಂತ, ವಿರೇಶ ದುಗ್ಗಾಣಿ, ಸುಪ್ರೀತ ತಾಂವಶಿ, ಸಂಗಪ್ಪ ಅಂಗಡಿ, ಬಸವರಾಜ ಮಂಗಸೂಳಿ, ಬಾಲಶೇಖರ ಬಂದಿ, ಲಿಂಗಪ್ಪ ಗಾಡವಿ, ಶಿವಯೋಗೇಪ್ಪ ಸಬರದ, ಈರಣ್ಣ ಜಕಾತಿ ಮತ್ತಿತರರು ಉಪಸ್ಥಿತರಿದ್ದರು.