ಲಕ್ಷ್ಮೇಶ್ವರ: 2017ರ ಫೆಬ್ರವರಿ 5ರಂದು ನಡೆದ ಗಲಭೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯನ್ನು ಸುಟ್ಟ ಪ್ರಕರಣದಲ್ಲಿ ತಾಲೂಕಿನ 23 ಜನರು ಅಪರಾಧಿಗಳೆಂದು ಘೋಷಣೆ ಮಾಡಿ ಗದಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.
ಆ 112 ಜನರಲ್ಲಿ 8 ಜನ ಮೃತಪಟ್ಟಿದ್ದು, ಓರ್ವ ಬಾಲಾಪರಾಧಿಯಾಗಿದ್ದಾನೆ. ಉಳಿದ 103 ಜನರ ಮೇಲೆ ತನಿಖೆ ಕೈಗೊಳ್ಳಲಾಗಿತ್ತು. ಗದಗ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯ ಇದರಲ್ಲಿ 23 ಜನರು ಅಪರಾಧಿಗಳೆಂದು, ಉಳಿದ 80 ಜನರು ನಿರಾಪರಾಧಿಗಳೆಂದು ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣ ಹಾಗೂ ದಂಡದ ವಿವರವನ್ನು ಮಾ. 24ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಆದೇಶಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ಗುರುತಿಸಿದವರ ಪೈಕಿ 15 ಜನ ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಹಾಜರಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ಪೋಲೀಸ್ ಮೂಲಕಗಳ ಖಚಿತ ಪಡಿಸಿವೆ.ಸುದೀರ್ಘ 8 ವರ್ಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯ 23 ಜನರು ಅಪರಾಧಿಗಳೆಂದು ತೀರ್ಪು ಪ್ರಕಟಿಸಿದ್ದು, ಅಂತಿಮ ಆದೇಶ ಏನಾಗಿರುತ್ತದೆ ಎಂಬ ಕುತೂಹಲ ತಾಲೂಕಿನಲ್ಲಿ ಸಂಚಲನ ಉಂಟು ಮಾಡಿದೆ.