ಕನ್ನಡಪ್ರಭ ವಾರ್ತೆ ಮಂಗಳೂರು
ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಡುಗಡೆಯಾದ 249 ಕೋಟಿ ರು.ಗಳಲ್ಲಿ ಸಜಿಪದಲ್ಲಿ ಜಾಕ್ವೆಲ್ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್ಲೈನ್ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್ ಟ್ಯಾಂಕ್ ನಿರ್ಮಾಣವಾಗಿದೆ. 2ನೇ ಹಂತದಲ್ಲಿ ಗ್ರಾಮೀಣ ಮಟ್ಟಕ್ಕೂ ನೀರು ಪೂರೈಕೆಗಾಗಿ ಮುಖ್ಯ ಟ್ಯಾಂಕ್ಗೆ ನೀರು ಹರಿಸಿ ಅಲ್ಲಿಂದ ಸಣ್ಣ ಟ್ಯಾಂಕ್ಗಳಿಂದ ಮನೆಗಳಿಗೆ ಸಂಪರ್ಕ ನೀಡುವ ಕೆಲಸ ನಡೆಯಲಿದೆ. ಇದಕ್ಕಾಗಿ 386 ಕೋಟಿ ರು..ಗಳ ಅನುದಾನ ಬಿಡುಗಡೆ ಆಗಿದೆ ಎಂದು ಯು.ಟಿ.ಖಾದರ್ ಹೇಳಿದರು.ಮುಂಬೈಯಿಂದ ಕೊಚ್ಚಿಗೆ ಕ್ರೂಸ್ಗೆ ಸೋಮೇಶ್ವರದಲ್ಲಿ ಬಂದರು ನಿರ್ಮಾಣಕೇಂದ್ರ ಸರ್ಕಾರ ಮುಂಬೈನಿಂದ ಕೊಚ್ಚಿಗೆ ಕ್ರೂಸ್ (ಪ್ರಯಾಣಿಕ ಹಡಗು ಸೇವೆ) ಆರಂಭಿಸಲಿದೆ. ಈ ಕ್ರೂಸ್ಗೆ ಉಳ್ಳಾಲದ ಸೋಮೇಶ್ವರದಲ್ಲಿ ನಿಲುಗಡೆಗೆ ಮಾಡಲು ಪೂರಕವಾದ ಬಂದರು ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರದೇಶ ಪ್ರಯಾಣಿಕ ಹಡಗು ತಂಗುದಾಣ ನಿರ್ಮಿಸಲು ಪ್ರಶಾಂತವಾದ ಹಾಗೂ ಪ್ರವಾಸಿ ತಾಣವಾಗಿ ರೂಪಿಸಲು ಉತ್ತಮ ಸ್ಥಳವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆ ಸಿದ್ಧಗೊಳ್ಳುತ್ತಿದೆ ಎಂದು ಯು.ಟಿ.ಖಾದರ್ ಹೇಳಿದರು.