ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಉರ್ವಾಸ್ಟೋರ್ ನಲ್ಲಿ ಶನಿವಾರ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ನವೀಕೃತ ಸಾಹಿತ್ಯ ಸದನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಯನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘಕ್ಕೆ ನೀಡುವುದಾಗಿಯೂ ಈ ಸಂದರ್ಭ ಘೋಷಿಸಿದರು.ಜಿಲ್ಲೆಗೆ 14 ಹೊಸ ಅಂಗನವಾಡಿ ಘೋಷಣೆಯಾಗಿದೆ. ಒಟ್ಟು 25 ಅಂಗನವಾಡಿಗಳನ್ನು ಜಿಲ್ಲೆಗೆ ಘೋಷಿಸುತ್ತಿದ್ದು, ಅದರಲ್ಲಿ 10 ಮೊಂಟೆಸರಿಗಳು ಸೇರಿದ್ದು, ಅಂಗನವಾಡಿಯೊಂದಕ್ಕೆ ತಲಾ 20 ಲಕ್ಷ ರು. ನೀಡಲಾಗುತ್ತದೆ ಎಂದರು.ಕರಾವಳಿ ಲೇಖಕಿಯರು ಮತ್ತು ವಾಚಕಿಯರ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು, ಮಹಿಳಾ ಲೇಖಕಿಯರ ಜೊತೆ ವಾಚಕಿಯರನ್ನು ಸೇರಿಸಿಕೊಂಡು ಸಂಘ ಮಾಡಿದ್ದು ಕಂಡು ವಿಶೇಷ ಎನ್ನಿಸಿತು ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಅಂಗನವಾಡಿಗಳ ಬಾಡಿಗೆ ಕಟ್ಟದಲ್ಲಿವೆ. ನಗರ ವ್ಯಾಪ್ತಿಯಲ್ಲಿ 30 ಅಂಗನವಾಡಿಗಳ ಬಾಡಿಗೆ ಕಟ್ಟದಲ್ಲಿವೆ. ಆರು ಕಟ್ಟಡಗಳ ಕಾಮಗಾರಿ ನಡೆಯುತ್ತಿದೆ. ಈ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿದರು.ಸಂಸದ ಕ್ಯಾ. ಬ್ರಿ ಜೇಶ್ ಚೌಟ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಶ್ರೀನಾಥ್ ಎಂ. ಪಿ. , ಎಂಆರ್ಪಿಎಲ್ ಅಧಿಕಾರಿ ಮೀನಾಕ್ಷಿ , ಪಾಲಿಕೆ ಸದಸ್ಯ ಗಣೇಶ್, ಸಂಘದ ಅಧ್ಯಕ್ಷೆ ಜ್ಯೋತಿ ಚೇಳೆಯಾರು, ಇಂದಿರಾ ಹಾಲಂಬಿ ಮತ್ತಿತರರಿದ್ದರು.ಡಾ. ಸುಧಾರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುಳಾ ನಾಯಕ್ ನಿರೂಪಿಸಿದರು............................ಮಹಿಳೆಯನ್ನು ಸಶಕ್ತಗೊಳಿಸಲು ಗ್ರಹಲಕ್ಷ್ಮಿ, ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮೀ ರಾಜಕೀಯ ದುರುದ್ದೇಶಕ್ಕಾಗಿ ಎಂದಿಗೂ ಬಳಕೆಯಾಗದು.
-ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ