ಹೃದ್ರೋಗ ಸಮಸ್ಯೆ ಇರುವ 25‌ ಮಕ್ಕಳಿಗೆ ಬೆಂಗಳೂರಲ್ಲಿ ಉಚಿತ ಚಿಕಿತ್ಸೆ

KannadaprabhaNewsNetwork |  
Published : Jun 14, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಆಯೋಜಿಸಿದ್ದ ಮಕ್ಕಳ ಹೃದಯ ತಪಾಸಣೆ ಶಿಬಿರದಲ್ಲಿ ಸಮಸ್ಯೆ ಪತ್ತೆಯಾದ 25 ಮಕ್ಕಳನ್ನು ಉಚಿತ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಆಯೋಜಿಸಿದ್ದ ಮಕ್ಕಳ ಹೃದಯ ತಪಾಸಣೆ ಶಿಬಿರದಲ್ಲಿ ಸಮಸ್ಯೆ ಪತ್ತೆಯಾದ 25 ಮಕ್ಕಳನ್ನು ಉಚಿತ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ.

ಕಳೆದ‌ ಮೇ‌ 16 ರಂದು‌ ಕಸಾಪ ತಾಲೂಕು ಮಹಿಳಾ ಘಟಕ ಬೆಂಗಳೂರಿನ ವೈದೇಹಿ ಆಸ್ಪತ್ರೆ‌ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಿದ್ದ ಹೃದಯ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲೆಯೂ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಮಕ್ಕಳನ್ನು ಮಕ್ಕಳ ತಜ್ಞರು ಮತ್ತು ಹೃದ್ರೋಗ ತಜ್ಞ ಡಾ. ಗೋವಿಂದರಾಜ್ ನೇತೃತ್ವದ ತಂಡ ನಿರಂತರ ಪರಿಶೀಲನೆ ನಡೆಸಿದಾಗ ಸುಮಾರು 35ಕ್ಕೂ ಹೆಚ್ಚು ಹೃದ್ರೋಗವಿರುವ ಮಕ್ಕಳು ಪತ್ತೆಯಾಗಿದ್ದರು.

ಹೃದ್ರೋಗದಿಂದ ಬಳಲುತ್ತಿರುವ ಮಕ್ಕಳ ಪೋಷಕರನ್ನು ಸಂಪರ್ಕಿಸಿ ಅವರ ಚಿಕಿತ್ಸೆ ಮಾಹಿತಿಯನ್ನು ಕಸಾಪ ತಂಡ ನೀಡಿತ್ತು. ಇದರೊಂದಿಗೆ ತಪಾಸಣೆ ಜವಾಬ್ದಾರಿ ಹೊತ್ತಿದ್ದ ವೈದೇಹಿ ಆಸ್ಪತ್ರೆಯವರನ್ನು ಸಂಪರ್ಕಿಸಿ ಜಿಲ್ಲೆಯ ಅಷ್ಟೂ ಮಕ್ಕಳಿಗೆ ಹೃದ್ರೋಗಕ್ಕೆ ಉಚಿತ ಹೆಚ್ಚಿನ ಶಸ್ತ್ರಚಿಕಿತ್ಸೆ ಹಾಗೂ ಹಲವು ಬಗೆಯ ಚಿಕಿತ್ಸೆ ಕೊಡಿಸಲು ಮನವೊಲಿಸಿದ್ದರು.

ಆ ಹಿನ್ನೆಲೆಯಲ್ಲಿ ಶನಿವಾರ ನಗರದ ಮಲ್ಲೆಗೌಡ ಸರ್ಕಾರ ಆಸ್ಪತ್ರೆ ಮಕ್ಕಳ ವಿಭಾಗದ ಆವರಣದಲ್ಲಿ 9 ತಿಂಗಳ ಹಸುಗೂಸಿನಿಂದ ಹಿಡಿದು 14 ವರ್ಷವರೆಗಿನ ಸುಮಾರು ಹೃದ್ರೋಗ ಇರುವ 25 ಮಕ್ಕಳನ್ನು ಪೋಷಕರ ಜತೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಯಿತು.

ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅಶ್ವತ್ಥಬಾಬು, ಆರ್ ಸಿ ಎಚ್ ಒ ಮಂಜುನಾಥ್, ತಾಲೂಕು ಆರೋಗ್ಯ ಕಲ್ಯಾಣಾಧಿಕಾರಿ ಡಾ. ಸೀಮಾ, ಮಕ್ಕಳ ತಜ್ಞ ಡಾ. ಮಲ್ಲಿಕಾರ್ಜುನ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ವ್ಯವಸ್ಥಾಪಕ ವಿನಯ್ ವಿ., ಜಿಲ್ಲಾ ಶಶ್ರೂಷಣಾ ಅಧಿಕಾರಿ ನಿಶ್ಚಿತ‌‌ ಹಾಗೂ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂಪ್ಲಾಂಟ್ ಗರ್ಭ ತಡೆ ಸುಲಭ ವಿಧಾನ
ಪ್ರಧಾನ ಮಂತ್ರಿ ಯೋಜನೆಗಳ ಜಾರಿಯಲ್ಲಿ ಚಿತ್ರದುರ್ಗ ಕಡೇ ಸ್ಥಾನ